ಉಡುಪಿ: ಅದಾನಿ ಆಡಳಿತದ ಉಡುಪಿಯ ಉಷ್ಣವಿದ್ಯುತ್ ಸ್ಥಾವರಕ್ಕೆ ತನ್ನ 10 ಕಿ.ಮೀ. ವ್ಯಾಪ್ತಿಯಲ್ಲಿ ಮಾಡಿರುವ ಪರಿಸರ ಹಾನಿಗಾಗಿ 52 ಕೋಟಿ ರೂ. (52,02,50,000ರೂ.) ದಂಡವನ್ನು ಪರಿಹಾರ ರೂಪದಲ್ಲಿ ಪಾವತಿಸು ವಂತೆ ಚೆನ್ನೈನ ರಾಷ್ಟ್ರೀಯ ಹಸಿರು ಪೀಠ ಆದೇಶ ನೀಡಿದೆ.
ಹಸಿರು ಪೀಠ ಈ ಹಿಂದೆ ಎರಡೆರಡು ಸಮಿತಿಗಳನ್ನು ಪರಿಸರಕ್ಕಾದ ಹಾನಿಯ ಅಂದಾಜಿಗೆ ರಚಿಸಿ ಸ್ಥಳಕ್ಕೆ ಕಳುಹಿಸಿದ್ದರೂ, ಅವುಗಳು ನೀಡಿದ ವರದಿ ಸಾರ್ವಜನಿಕರಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡಲು ವಿಫಲವಾಗಿತ್ತು. ಒಂದು ಸಮಿತಿ ಕೇವಲ 4.89 ಕೋಟಿ ರೂ. ದಂಡವನ್ನು ಕಂಪೆನಿಗೆ ವಿಧಿಸುವಂತೆ ವರದಿಯಲ್ಲಿ ತಿಳಿಸಿತ್ತು. ಇದರ ವಿರುದ್ಧ ನಂದಿಕೂರು ಜನಜಾಗೃತಿ ಸಮಿತಿ ಮೇಲ್ಮನವಿ ಸಲ್ಲಿಸಿದ್ದು, ಇದರಂತೆ ಹಸಿರು ಪೀಠದಿಂದ ನೇಮಕಗೊಂಡ ಮತ್ತೊಂದು ಸಮಿತಿ ಒಟ್ಟಾರೆಯಾಗಿ 74.93 ಕೋಟಿ ರೂ. ಪರಿಹಾರ ನೀಡುವಂತೆ ವರದಿಯಲ್ಲಿ ತಿಳಿಸಿತ್ತು.
ಕಳೆದ ಸುಮಾರು ಮೂರು ದಶಕಗಳಿಗೂ ಅಧಿಕ ಸಮಯದಿಂದ ಪಡುಬಿದ್ರಿ ಪರಿಸರದಲ್ಲಿ ಉಷ್ಣವಿದ್ಯುತ್ ಸ್ಥಾವರ ಸ್ಥಾಪನೆ ವಿರುದ್ಧ ಹೋರಾಟ ನಡೆಸಿಕೊಂಡು ಬರುತ್ತಿರುವ ಬಾಲಕೃಷ್ಣ ಶೆಟ್ಟಿ ಅವರ ಅಧ್ಯಕ್ಷತೆಯ ನಂದಿಕೂರು ಜನಜಾಗೃತಿ ಸಮಿತಿ ರಾಷ್ಟ್ರೀಯ ಹಸಿರು ಪೀಠದ ದಕ್ಷಿಣ ವಲಯ ಪೀಠದ ಮುಂದೆ ಹೂಡಿದ ವ್ಯಾಜ್ಯದ ಕುರಿತಂತೆ ಪೀಠ ತನ್ನ ಅಂತಿಮ ತೀರ್ಪನ್ನು ನೀಡಿದೆ.
ಇಲ್ಲಿನ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳು ಮೇ.1 ರಿಂದ ನಾಪತ್ತೆಯಾಗಿರುವ ಘಟನೆಯೊಂದು ವರದಿಯಾಗಿದೆ. ಇದರ ಪತ್ತೆಗಾಗಿ ಬಜರಂಗದಳ ಇದೀಗ…
ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದು ಒಂದು ವರ್ಷ ಆಗಿದೆ. ಆದರೆ ಇಲ್ಲಿ ಒಂದು ವರ್ಷದಲ್ಲಿ ಒಂದೂ ಶೌಚಾಲಯ ಕಟ್ಟಲು ಅವರಿಗೆ…
ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಿರೀಕಾಟಿ ಗ್ರಾಮದ ಸರ್ವೆ ನಂ. 108 ರಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಸೇರಿದ 2 ಎಕರೆ…
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…