ಉಡುಪಿಯ ಬಿ ಆರ್ ಎಸ್ ಆಸ್ಪತ್ರೆ ಸರ್ಕಾರದ ಸುಪರ್ದಿಗೆ
ಉಡುಪಿ: ಈ ಹಿಂದೆ ದುಬೈ ಉದ್ಯಮಿ ಬಿ ಆರ್ ಶೆಟ್ಟಿ ಅವರು ವಹಿಸಿಕೊಂಡು ನಡೆಸುತಿದ್ದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಉಚಿತ ಆಸ್ಪತ್ರೆಯನ್ನು ಸರ್ಕಾರವೇ ವಶಕ್ಕೆ ಪಡೆದುಕೊಂಡು ನಡೆಸಲಿದೆ ಎಂದು ಸಚಿವ ಡಾ ಸುಧಾಕರ್ ತಿಳಿಸಿದ್ದಾರೆ. . ಕೆಲ ಪತ್ರ ವ್ಯವಹಾರಗಳು ನಡೆದ ಮೇಲೆ ಎಲ್ಲಾ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ
ಆಸ್ಪತ್ರೆಯನ್ನು ಮುನ್ನಡೆಸುವ ಸಮಸ್ಯೆಗಳ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಸುಧಾಕರ್ ಅವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಸಾಧಕ ಬಾಧಕಗಳ ಕುರಿತಂತೆ ಸಮಗ್ರವಾಗಿ ಚರ್ಚೆ ಮಾಡಲಾಯ್ತು.ಕಳೆದ ಐದಾರು ತಿಂಗಳಿನಿಂದ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಸಂಬಳ ನೀಡಲಾಗಿಲ್ಲ. ಉಚಿತ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ಕೆಲ ತಿಂಗಳಿನಿಂದ ಆರೋಪ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ವೈದ್ಯರು, ಸಿಬ್ಬಂದಿ ಆಗಾಗ ತಮ್ಮ ಆಕ್ರೋಶ ಹೊರ ಹಾಕುತ್ತಿದ್ದರು. ರೋಗಿಗಳಿಗೆ ಯಾವುದೇ ಸೇವೆಗಳನ್ನು ನೀಡಲು ನಿರಂತರ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿದ್ದರು. ಇಷ್ಟಾಗುತ್ತಲೇ ಆರೋಗ್ಯ ಇಲಾಖೆ ಅಧಿಕಾರಿಗಳು, ಉಡುಪಿ ಶಾಸಕ ರಘುಪತಿ ಭಟ್ ಜೊತೆ ಸಚಿವ ಸುಧಾಕರ್ ಸಭೆ ನಡೆಸಿ ಎಲ್ಲ ಮಾಹಿತಿಗಳನ್ನು ಸಂಗ್ರಹ ಮಾಡಿದ್ದಾರೆ.
ಉಡುಪಿಯ ಬಿ ಆರ್ ಎಸ್ ಆಸ್ಪತ್ರೆ ಸರ್ಕಾರದ ಸುಪರ್ದಿಗೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.