News Karnataka Kannada
Monday, May 06 2024
ಉಡುಪಿ

ಉಡುಪಿ: ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ದ್ವಿತೀಯ ಆರಾಧನೋತ್ಸವ ಆರಂಭ

Pejawaraa
Photo Credit :

ಉಡುಪಿ: ಪೇಜಾವರ ಮಠದ ಪದ್ಮವಿಭೂಷಣ ಪುರಸ್ಕೃತ , ಕೀರ್ತಿ ಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದ್ವಿತೀಯ ಆರಾಧನೋತ್ಸವವು ಬೆಂಗಳೂರಿನ ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದ ಆವರಣದಲ್ಲಿರುವ ಅವರ ಮೂಲ ವೃಂದಾವನ ಸನ್ನಿಧಿಯಲ್ಲಿ ಆರಂಭಗೊಂಡಿತು. ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಈ ಮಹೋತ್ಸವವು ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಾವಳಿಗಳ ಅನುಸಾರ ಧಾರ್ಮಿಕ ವಿಧಿವಿಧಾನಗಳಿಗೆ ಸೀಮಿತಗೊಳಿಸಿ ಸರಳವಾಗಿ ನಡೆಸಲಾಗುತ್ತಿದೆ.

ಮಂಗಳವಾರ ಪೂರ್ವಾರಾಧನೆಯ ಅಂಗವಾಗಿ ವಿದ್ಯಾಪೀಠದ ಋತ್ವಿಜರಿಂದ ಶ್ರೀ ರಾಮ‌- ಕೃಷ್ಣ -ವೇದವ್ಯಾಸ – ನರಸಿಂಹ ಮಂತ್ರ ಹೋಮಗಳು ನೆರವೇರಿದವು.ಸಂಜೆ ವಿದ್ವತ್ಗೋ಼ಷ್ಠಿ ನಡೆಯಿತು.

ಉಡುಪಿ ಹಾಗೂ ಮಂಗಳೂರಿನ ಸಮೀಪದ ಪೇಜಾವರದಲ್ಲಿನ ಮಠಗಳು ಮತ್ತು ಶ್ರೀ ವಿಶ್ವೇಶತೀರ್ಥರು ಉತ್ತರದ ಬದರಿಯಿಂದ ದಕ್ಷಿಣದ ರಾಮೇಶ್ವರದವರೆಗೆ ಸಂಸ್ಥಾಪಿಸಿದ ಎಲ್ಲ ಸಂಘ ಸಂಸ್ಥೆಗಳು ಹಾಗೂ ಶ್ರೀಮಠದ ಶಾಖೆಗಳಲ್ಲೂ ಆರಾಧನೆಯ ನಿಮಿತ್ತ ಧಾರ್ಮಿಕ ವಿಧಿಗಳಿಗೆ ಸೀಮಿತಗೊಳಿಸಿ ಗುರು ಸ್ಮರಣೆ ನಡೆಯಲಿದೆ ಎಂದು ಪೇಜಾವರ ಮಠದ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು