News Karnataka Kannada
Thursday, May 02 2024
ಉಡುಪಿ

ಉಡುಪಿ: ಮಹಿಳೆಯನ್ನು ಕುತ್ತಿಗೆ ಬಿಗಿದು ಕೊಲೆ ಮಾಡಿದ ವ್ಯಕ್ತಿ ಬಂಧನ

Photo Credit : IANS

ಉಡುಪಿ: ಉಡುಪಿಯ ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಅತ್ರಾಡಿ ಗ್ರಾಮದ ಮದಗ ಮುಳ್ಳುಗುಜ್ಜೆಯಲ್ಲಿ ತಾಯಿ ಹಾಗೂ 10 ವರ್ಷದ ಪುತ್ರಿಯನ್ನು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಹರೀಶ್(29) ಬಂಧಿತ ಆರೋಪಿಯಾಗಿದ್ದಾನೆ. ಮೇ 8 ರಂದು ಚೆಲುವಿ(28) ಹಾಗೂ ಅವರ ಪುತ್ರಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಗಂಡನಿಂದ ದೂರವಾಗಿದ್ದ ಚೆಲುವಿಯ ದೂರದ ಸಂಬಂಧಿಯಾಗಿದ್ದ ಹರೀಶ್ ಮದುವೆಯಾಗುವಂತೆ ಪೀಡಿಸುತ್ತಿದ್ದ. ಮೇ 8 ರಂದು ಚೆಲುವಿ ಬೇರೆಯವರೊಂದಿಗೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಜಗಳವಾಡಿ ಶಾಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ. ಸಾಕ್ಷ್ಯ ಹೇಳುವ ಭಯದಲ್ಲಿ ಆಕೆಯ ಪುತ್ರಿಯನ್ನು ಕೂಡ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದ. ನಂತರ ಚೆಲುವಿಯ ಕೊರಳಿನಲ್ಲಿದ್ದ ಚಿನ್ನದ ಸರ ಮತ್ತು ಮೊಬೈಲ್ ತೆಗೆದುಕೊಂಡು ಪರಾರಿಯಾಗಿದ್ದ. ಹಿರಿಯಡಕ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು