News Karnataka Kannada
Monday, May 06 2024
ಉಡುಪಿ

ಕಾನೂನು ಸುವ್ಯವಸ್ಥೆ ಕಾಪಾಡುವುದು ಗೊತ್ತಿದೆ, ವಿರೋಧ ಪಕ್ಷಗಳ ಪಾಠ ಅಗತ್ಯ ಇಲ್ಲ: ಸಿಎಂ

Cm Bommai
Photo Credit :

ಉಡುಪಿ : ವಿಚಾರಗಳನ್ನು ಪ್ರಚಾರ ಮಾಡಲು ಸರ್ಕಾರ ಅಡ್ಡಿ ಪಡಿಸುವುದಿಲ್ಲ. ಆದರೆ, ಕಾನೂನು ಕೈಗೆತ್ತಿಕೊಂಡರೆ, ಹಿಂಸೆಗೆ ಇಳಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳ ಕುರಿತು ಉಡುಪಿ ಹೆಲಿಪ್ಯಾಡ್‌ನಲ್ಲಿ ಸೋಮವಾರ ಪ್ರತಿಕ್ರಿಯೆ ನೀಡಿದ ಸಿಎಂ, ‘ಸಂವಿಧಾನ ಬದ್ಧವಾಗಿ ರಚನೆಯಾಗಿರುವ ‌ಸರ್ಕಾರಕ್ಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಗೊತ್ತಿದೆ. ಎಲ್ಲರೂ ಸಮಾನರು ಎಂಬ ದೃಷ್ಟಿಯಿಂದ ಸರ್ಕಾರ ಕೆಲಸ ಮಾಡುತ್ತಿದ್ದು, ಈ ವಿಚಾರದಲ್ಲಿ ವಿರೋಧ ಪಕ್ಷಗಳ ಪಾಠದ ಅಗತ್ಯ ಇಲ್ಲ ಎಂದರು.

ಹಿಂದೆ ನಡೆದ ಹಲವು ಯುವಕರ ಕೊಲೆ ಪ್ರಕರಣಗಳಲ್ಲಿ ನೇರವಾಗಿ ಭಾಗಿಯಾಗಿದ್ದ ಸಂಘಟನೆಗಳ ಹಾಗೂ ಮುಖಂಡರ ಮೇಲಿದ್ದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಕೈಬಿಟ್ಟಿತ್ತು. ಈಗ ಬಿಜೆಪಿಗೆ ಪಾಠ ಹೇಳಲು ಬರುತ್ತಿರುವ ಕಾಂಗ್ರೆಸ್‌ನಿಂದ ಕಲಿಯಬೇಕಾಗಿರುವುದು ಏನೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರ ಯಾವ ಸಂದರ್ಭದಲ್ಲಿ, ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೋ ತೆಗೆದುಕೊಳ್ಳಲಿದೆ. ಪ್ರಗತಿಪರವಾದ ರಾಜ್ಯವನ್ನು ಕಾಪಾಡಿಕೊಳ್ಳುವುದು ಗೊತ್ತಿದೆ ಎಂದು ಬೊಮ್ಮಾಯಿ ತಿರುಗೇಟು ನೀಡಿದರು‌

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು