News Karnataka Kannada
Sunday, April 28 2024
ಉಡುಪಿ

ಕಾಲೇಜು ಹಂತದಲ್ಲಿಯೇ ಸ್ವಂತ ಉದ್ಯೋಗದ ಮಾಹಿತಿ ನೀಡಿ : ಸದಾಶಿವ ಪ್ರಭು

New Project (32)
Photo Credit :
ಉಡುಪಿ :  ಸ್ವಂತ ಉದ್ಯೋಗ ಮಾಡಲು ಬಯಸುವ ಯುವ ಜನತೆಗೆ ಕಾಲೇಜು ಹಂತದಲ್ಲಿಯೇ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ನೆಹರೂ ಯುವ ಕೇಂದ್ರದ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನೆಹರೂ ಯುವ ಕೇಂದ್ರದ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತ ಸಭೆಯಲ್ಲಿ ಮಾತನಾಡಿ, ಯುವ ಜನತೆ ಪದವಿ ನಂತರ ಭವಿಷ್ಯ ಕಟ್ಟಿಕೊಳ್ಳಲು ಪೂರಕವಾಗುವಂತೆ, ಅಂತಿಮ ವರ್ಷದ ಪದವಿ ಓದುವಾಗಲೇ ಸ್ವ ಉದ್ಯೋಗಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಕ್ರಮ ಆಯೋಜಿಸಬೇಕು.
ಕಾರ್ಯಕ್ರಮಗಳಿಗೆ ಲೀಡ್‌ ಬ್ಯಾಂಕ್‌ ಅಧಿಕಾರಿಗಳನ್ನು ಆಹ್ವಾನಿಸಿ, ಸ್ವಯಂ ಉದ್ಯೋಗಕ್ಕೆ ಬ್ಯಾಂಕ್‌ಗಳು ನೀಡುವ ವಿವಿಧ ಬಗೆಯ ಸಾಲಗಳ ಮಾಹಿತಿ, ಸಬ್ಸಿಡಿ ಮೊತ್ತದ ಬಗ್ಗೆ ಸಮಗ್ರ ವಿವರಗಳನ್ನು ನೀಡಬೇಕು ಎಂದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸ್ವಉದ್ಯೋಗಕ್ಕೆ ಅನುಕೂಲವಾಗುವಂತೆ ಇರುವ ಯೋಜನೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಬೇಕು. ಕೇಂದ್ರ ಸರ್ಕಾರ ಸ್ಟಾರ್ಟ್ ಆಯಪ್‌ಗಳನ್ನು ಆರಂಭಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಆತ್ಮ ನಿರ್ಭರ ಯೋಜನೆಯಡಿ ಉದ್ದಿಮೆ ಆರಂಭಿಸಲು ಅವಕಾಶಗಳಿದ್ದು, ಇದರ ಬಗ್ಗೆ ಯುವಕರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಬೇಕು ಎಂದರು.
ಯುವ ಶಕ್ತಿಯನ್ನು ಜಿಲ್ಲೆಯ ಅಭಿವೃದ್ದಿಗೆ ಪೂರಕವಾಗಿ ಬಳಕೆಯಾಗುವ ಕುರಿತು ವಾರ್ಷಿಕ ಕ್ರಿಯಾ ಯೋಜನೆ ರೂಪಿಸಬೇಕು. ಪ್ರಾಕೃತಿಕ ವಿಕೋಪಗಳು ಎದುರಾದಾಗ ಸಮಾಜದ ನೆರವಿಗೆ ದಾವಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಸಂಬಂಧ ಯುವಕ ಸಂಘಗಳಿಗೆ ತರಬೇತಿ ನೀಡಬೇಕು. ಗಾಂಧಿ ಜಯಂತಿಯಂದು ಜಿಲ್ಲೆಯ ಎಲ್ಲ ಬೀಚ್‌ಗಳಲ್ಲಿ ಸ್ವಚ್ಚತಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಲಶಕ್ತಿ ಅಭಿಯಾನ, ನಶಾ ಮುಕ್ತ ಭಾರತದಂತಹ ಕಾರ್ಯಕ್ರಮಗಳಲ್ಲಿ ಯುವಜನತೆಯ ಸಹಭಾಗಿತ್ವ ಪಡೆಯಬೇಕು ಎಂದರು.
ನೆಹರೂ ಯುವ ಕೇಂದ್ರದ ವಿಷ್ಣುಮೂರ್ತಿ ಕ್ರಿಯಾ ಯೋಜನೆಯ ವಿವರ ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಯುವಕ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು