ಕುಂದಾಪುರ: ಗುರುವಾರ ತಡರಾತ್ರಿ ನಗರದ ಶಾಸ್ತ್ರಿ ಪಾರ್ಕ್ ಬಳಿ ಗಾಂಜಾ ಮಾರಾಟ ನಡೆಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೋಲಿಸರು ಬಂಧಿಸಿದ್ದಾರೆ. ಕಾರವಾರ ಮೂಲದ ಮಹಮ್ಮದ್ ಜಾಫರ್ ಗುಡುಮಿಯಾ(28) ಬಂಧಿತ ಆರೋಪಿ.
ಕುಂದಾಪುರ ಡಿವೈಎಎಸ್ಪಿ ರಾತ್ರಿ ರೈಂಡ್ಸ್ ಕರ್ತವ್ಯದಲ್ಲಿದ್ದಾಗ ಶಾಸ್ತ್ರಿ ಪಾರ್ಕ್ ಬಳಿ ಅನುಮಾನಸ್ಪದವಾಗಿ ಕಂಡುಬಂದ ವ್ಯಕ್ತಿಯನ್ನು ವಿಚಾರಿಸಿದಾಗ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ.
ಬಂಧಿತನಿಂದ 40,000 ರೂ ಮೌಲ್ಯದ 1 ಕೆಜಿ 810 ಗ್ರಾಂ ಗಾಂಜಾ ಹಾಗೂ 10,000 ರೂ ಮೌಲ್ಯದ 1 ಗ್ರಾಂ ಬ್ರೌನ್ ಶುಗರ್, 1500 ರೂ ನಗದು ವಶ ಪಡಿಸಿಕೊಳ್ಳಲಾಗಿದೆ.
ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರ್ ಚಂದ್ರ ಅವರ ಮಾರ್ಗದರ್ಶನದಲ್ಲಿ, ಕುಂದಾಪುರ ಅಪರಾಧ ವಿಭಾಗದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ವಿಜಯ್, ರಮೇಶ್, ಕುಂದಾಪುರ ಠಾಣೆಯ ರಾಘವೇಂದ್ರ ಮೊಗೇರ, ವಿಜೇತ್, ಜೀಪು ಚಾಲಕ ರಾಜು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.