ಉಡುಪಿ: ಇತಿಹಾಸ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡಲಾಗಿದೆ.
ಕೇರಳ ಹಾಗೂ ಮಹಾರಾಷ್ಟ್ರದ ಭಕ್ತರನ್ನು ಗುರುತಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಎಸ್ಪಿಬಿ ಮಹೇಶ್ ತಿಳಿಸಿದ್ದಾರೆ.
ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವ ಭಕ್ತರು ಕಡ್ಡಾಯವಾಗಿ 72 ಗಂಟೆ ಮೀರದ ಕೋವಿಡ್ ಆರ್ಟಿಪಿಸಿಆರ್ ನೆಗೆಟಿವ್ ವರದಿ ಸಲ್ಲಿಸಬೇಕು. ವರದಿ ಇಲ್ಲದ ಭಕ್ತರಿಗೆ ಸ್ಥಳದಲ್ಲೇ ಕೋವಿಡ್ ಪರೀಕ್ಷೆಗೊಳಪಡಿಸಿ, 7 ದಿನ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗುವುದು. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಮತ್ತೊಮ್ಮೆ ಆರ್ಟಿಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ಇದ್ದರೆ ಕಳುಹಿಸಲಾಗುವುದು ಎಂದು ಮಾಹಿತಿ ನೀಡಿದರು.