ಬ್ರಹ್ಮಾವರ : ಕಾಂಗ್ರೆಸ್ನ್ನು ತ್ಯಜಿಸುವ ಇರಾದೆಯ ಹಲವು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಹಲವು ನಾಯಕರು ಬಿಜೆಪಿ ಸೇರುತ್ತಾರೆ. ಬಿಜೆಪಿಗೆ ಯಾರೇ ಬಂದರೂ ಬಾಗಿಲು ತೆರೆದಿದೆ. ಆದರೆ ಕ್ರಿಮಿನಲ್ ಕೇಸು ಇದ್ದವರಿಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನೀಲಾವರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಕಾಲಕಾಲಕ್ಕೆ ಅನ್ಯ ಪಕ್ಷದಲ್ಲಿದ್ದವರು ನಮ್ಮ ಪಕ್ಷವನ್ನು ಸೇರುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರದ್ದು ಅಭಿವೃದ್ಧಿ, ಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರ ರಹಿತ ಆಡಳಿತ. ಮೋದಿ ನೇತೃತ್ವವನ್ನು ಒಪ್ಪಿ ಹಲವಾರು ಜನ ಪಕ್ಷ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.
ರಾಜ್ಯದ ಹಲವು ಗಲಭೆ, ಪಾಕಿಸ್ತಾನ ಪರ ಘೋಷಣೆ ವಿಚಾರ ಬಗ್ಗೆ ಎನ್ಐಎ ತನಿಖೆ ಆಗುತ್ತದೆ. ಈ ಘಟನೆ ಹಿಂದಿರುವ ಷಡ್ಯಂತ್ರ ಇದಕ್ಕೆ ಇರುವ ಬೆಂಬಲ ಯಾರು ಎಂಬುದು ತನಿಖೆ ಆಗಲಿದೆ. ಇಂಥ ಚಟುವಟಿಕೆ ಗಳಿಗೆ ಯಾವ ದೇಶದ ಬೆಂಬಲ ಇದೆ? ನಮ್ಮ ದೇಶದವರ ಬೆಂಬಲ ಇದ್ದರೆ ಅದು ಯಾರು ಎಂಬ ಬಗ್ಗೆ ಎನ್ಐಎ ತನಿಖೆ ಆಗಲಿದೆ ಎಂದು ಶೋಭಾ ಹೇಳಿದರು.
ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಆರಂಭಿಸಿರುವ ಎಸ್ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ…
ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಬಾಳೆ ಬೆಳೆ ಮತ್ತು ಹೀರೇ ಬೆಳೆ ನೆಲ ಕಚ್ಚಿರುವ ಘಟನೆ ನಂಜನಗೂಡು ತಾಲ್ಲೂಕಿನ…
ದಕ್ಷಿಣ ಭಾರತದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ನಂಜನಗೂಡಿನ 8 ವರ್ಷದ ಬಾಲಕಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದು ಕೀರ್ತಿ…
ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ದೇಶಕ್ಕಾಗಿ ಸಾಯುತ್ತಿದ್ದ ಸಮಯವಿತ್ತು. ಬಿಜೆಪಿ ಅವಧಿಯಲ್ಲಿ ಭಾರತ…
ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ರುಮಟಾಲಜಿ (ಸಂಧಿವಾತ) ವಿಭಾಗ ಹಾಗೂ ಫಿಸಿಕಲ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟೇಶನ್ (ದೈಹಿಕ ಔಷಧ ಮತ್ತು ಪುನರ್ವಸತಿ)…
ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ…