ಉಡುಪಿ : ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವುದು ತುಳು ನಾಡಿನ ಅನೇಕ ವರ್ಷಗಳ ಬಯಕೆಯಾಗಿದೆ, ಅದನ್ನು ಇಡೇರಿಸುವುದು ನನ್ನ ಮುಖ್ಯ ಉದ್ದೇಶವಾಗಿದೆ ಎಂದು ಕನ್ನಡ ಮತ್ತು ಸಂಸೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು
ಶನಿವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು ತುಳು ಭಾಷೆ ದ್ರಾವಿಡ ಭಾಷೆಗಳಲ್ಲೊಂದು, ಇದಕ್ಕೆ ಸೂಕ್ತ ಸ್ಥಾನಮಾನ ದೊರಕಿಸಿ ಕೊಡುವುದು ನನ್ನ ಆದ್ಯ ಕರ್ತವ್ಯ ಎಂದು ಹೇಳಿದರು.