News Karnataka Kannada
Tuesday, May 07 2024
ಉಡುಪಿ

ದೋಣಿ ದುರಂತ: ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಶವ ಪತ್ತೆ

Suicide Jump River
Photo Credit :

ಉಡುಪಿ: ಬೈಂದೂರು ತಾಲ್ಲೂಕಿನ ಪಡುವರಿ ಗ್ರಾಮದ ತಾರಾಪತಿಯಲ್ಲಿ ಶುಕ್ರವಾರ ನಾಡದೋಣಿ ಮಗುಚಿ ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಶವ ಶನಿವಾರ ಪತ್ತೆಯಾಗಿದೆ.

‘ಜೈ ಗುರೂಜಿ’ ದೋಣಿ ಮಾಲೀಕ ಚರಣ್‌ರಾಜ್ ಖಾರ್ವಿ (25) ಅವರ ಶವ ಅಮ್ಮನವರ ತೊಪ್ಲು ಬಳಿ ಹಾಗೂ ಅಣ್ಣಪ್ಪ ಖಾರ್ವಿ (40) ಅವರ ಶವ ಕರ್ಕಿಕಳಿ ಬಳಿ ಸಿಕ್ಕಿದೆ.

ಶುಕ್ರವಾರ ಮೀನುಗಾರಿಕೆ ಮುಗಿಸಿ ಅಳ್ವೆಕೋಡಿಗೆ ಬರುವಾಗ ಅಲೆಗಳ ಹೊಡೆತಕ್ಕೆ ಸಿಕ್ಕು ದೋಣಿ ಮಗುಚಿತ್ತು. ಅದರಲ್ಲಿದ್ದ 7 ಮೀನುಗಾರರ ಪೈಕಿ ಇಬ್ಬರು ನಾಪತ್ತೆಯಾಗಿದ್ದರು. ವಿಜೇತ್, ಪ್ರವೀಣ್, ಸಚಿನ್, ಸುಮಂತ್, ವಾಸುದೇವ ಖಾರ್ವಿ ಅವರನ್ನು ಕರಾವಳಿ ಕಾವಲು ಪಡೆಯ ಪೋಲಿಸರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದರು.

ಶಾಸಕರ ಭೇಟಿ: ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಸ್ಥಳಕ್ಕೆ ಭೇಟಿನೀಡಿ, ಮೃತ ಮೀನುಗಾರರ ಕುಟುಂಬಕ್ಕೆ ಸರ್ಕಾರದಿಂದ ₹ 6 ಲಕ್ಷ ಪರಿಹಾರದ ಜತೆಗೆ ವೈಯಕ್ತಿಕ ಪರಿಹಾರ ನೀಡುವುದಾಗಿ ತಿಳಿಸಿ, ಇಂತಹ ದುರ್ಘಟನೆಗಳು ಮರುಕಳಿಸದಿರಲು ಮೀನುಗಾರರಿಗೆ ಲೈಫ್‌ ಜಾಕೆಟ್‌ ಒದಗಿಸುವ ಭರವಸೆ ನೀಡಿದರು.

ಮತ್ತೊಂದೆಡೆ, ಗಂಗೊಳ್ಳಿಯಲ್ಲಿ ಶುಕ್ರವಾರ ಪಾತಿದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ದೋಣಿ ಮಗುಚಿ ನಾಪತ್ತೆಯಾಗಿದ್ದ ದೇವೇಂದ್ರ ಖಾರ್ವಿ (35) ಅವರ ಶವ ಶನಿವಾರ ಇಲ್ಲಿನ ಪಂಚಗಂಗಾವಳಿ ನದಿ ತೀರದ ಕಳವಿನ ಬಾಗಿಲು ಬಳಿ ದೊರೆತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು