News Karnataka Kannada
Monday, May 06 2024
ಉಡುಪಿ

ಭೀಕರ ರಸ್ತೆ ಅಪಘಾತ : ತಂದೆ-ಮಗಳು ಸಾವು

8 passengers seriously injured in private bus accident
Photo Credit :

ಉಡುಪಿ : ಸ್ಕೂಟರ್​ ಮತ್ತು ಕೇರಳ ಕೆಎಸ್​ಆರ್​ಟಿಸಿ ಬಸ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಪುತ್ರಿ ಜತೆ ಎಎಸ್​ಐ ಸಾವು ಮೃತಪಟ್ಟ ಘಟನೆ ಸಂತೆಕಟ್ಟೆ ಜಂಕ್ಷನ್​ನಲ್ಲಿ ಸಂಭವಿಸಿದೆ.

ಗರಡಿಮಜಲು ನಿವಾಸಿ ಕರಾವಳಿ ಕಾವಲು ಪಡೆಯ ಎಎಸ್​ಐ ಗಣೇಶ್​ ಪೈ (58) ಹಾಗೂ ಇವರ ಹಿರಿಯ ಮಗಳು ಗಾಯತ್ರಿ (27) ಮೃತರು. ಗಾಯತ್ರಿಗೆ ಮೂರು ವರ್ಷದ ಹಿಂದೆ ವಿವಾಹವಾಗಿದ್ದು, ಗಂಡ ಬ್ಯಾಂಕ್​ ಉದ್ಯೋಗಿಯಾಗಿದ್ದಾರೆ. ಸದ್ಯ ಮೂರು ತಿಂಗಳ ಗರ್ಭಿಣಿಯಾಗಿದ್ದ ಅವರು ತವರು ಮನೆಯಲ್ಲಿ ಮಾ.4ರಂದು ನಿಗದಿಯಾಗಿದ್ದ ಸಮಾರಂಭಕ್ಕೆ 2 ದಿನ ಮುಂಚಿತವಾಗಿ ಆಗಮಿಸುತ್ತಿದ್ದರು.

ಬುಧವಾರ ಬೆಳಗ್ಗೆ 5.30ಕ್ಕೆ ಗದಗದಿಂದ ಆಗಮಿಸಿದ್ದ ತಮ್ಮ ಮಗಳನ್ನು ಬಸ್​ ತಂಗುದಾಣದಿಂದ ಮನೆಗೆ ಕರೆದುಕೊಂಡು ಸ್ಕೂಟರ್​ನಲ್ಲಿ ತಂದೆ ಹೋಗುತ್ತಿದ್ದರು. ಈ ವೇಳೆ ಕೇರಳದಿಂದ ಕೊಲ್ಲೂರಿಗೆ ಹೋಗುತ್ತಿದ್ದ ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್​ ಸ್ಕೂಟರ್​ಗೆ ಡಿಕ್ಕಿ ಹೊಡಿದ್ದಿದ್ದು, ತಂದೆ-ಮಗಳು ದುರ್ಮರಣ ಹೊಂದಿದ್ದಾರೆ.

ಘಟನೆಗೆ ಬಸ್​ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ತೀರಾ ಎಡಬದಿಗೆ ಚಲಿಸಿದ ಬಸ್​ ಗಣೇಶ್​ ಪೈ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ತಂದೆ ಮತ್ತು ಮಗಳು ರಸ್ತೆ ಮೇಲೆ ಬಿದ್ದು, ಇಬ್ಬರ ತಲೆಗೂ ಗಂಭೀರ ಗಾಯವಾಗಿತ್ತು. ಗಾಯತ್ರಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಣೇಶ್​ ಪೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು