News Karnataka Kannada
Monday, May 06 2024
ಉಡುಪಿ

ರಾಜ್ಯವೇ ಹೆಮ್ಮೆ ಪಡುವಂತೆ ಮೇಕೆದಾಟು ಯೋಜನೆ ಜಾರಿ; ಸಚಿವ ಕೋಟ ಶ್ರೀನಿವಾಸ ಪೂಜಾರಿ

No one should be happy that opposition leader has not been elected: Kota Srinivas Poojary
Photo Credit :

ಉಡುಪಿ : ಕಾಂಗ್ರೆಸ್‌ ನಾಯಕರು ಖುಷಿಯಾಗುವಂತೆ, ರಾಜ್ಯವೇ ಹೆಮ್ಮೆ ಪಡುವಂತೆ ಮೇಕೆದಾಟು ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಸಚಿವರು, ಮೇಕೆದಾಟು ಯೋಜನೆ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿದ್ದು ಕಾನೂನು ತಜ್ಞರ ಜತೆ ಚರ್ಚಿಸಿ ಶೀಘ್ರ ಇತ್ಯರ್ಥಗೊಳಿಸಲಾಗುವುದು. ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ರಾಜಕೀಯ ಪ್ರೇರಿತ ಮೇಕೆದಾಟು ಪಾದಯಾತ್ರೆ ಬಿಟ್ಟು ರಾಜ್ಯದ ಸಮಸ್ಯೆಗಳ ಕುರಿತು ಚರ್ಚಿಸಲು ಸದನಕ್ಕೆ ಬರಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಮೊದಲ ಹಂತದ ಪಾದಯಾತ್ರೆಯಲ್ಲಿ ರಾಜ್ಯದ ಜನರಿಗೆ ಕೊರೋನಾ ಹಂಚಲಾಯಿತು. ಎರಡನೇ ಹಂತದ ಪಾದಯಾತ್ರೆಯಲ್ಲಿ ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆಯಿಂದ ಸವಾರರು ಕಿರಿಕಿರಿ ಅನುಭವಿಸಿದರು. ಪಾದಯಾತ್ರೆಯಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೋಟ ಟೀಕಿಸಿದರು.

ಕಾಂಗ್ರೆಸ್ ನಾಯಕರು ಸದನವನ್ನು ಬಹಿಷ್ಕರಿಸಿದ್ದರಿಂದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಾಧ್ಯವಾಗಲಿಲ್ಲ. ಮೇಕೆದಾಟು ಪಾದಯಾತ್ರೆಯ ಹಿಂದೆ ರಾಜಕೀಯ ಉದ್ದೇಶ ಇರುವುದನ್ನು ಜನರು ಅರಿತಿದ್ದಾರೆ ಎಂದು ಕೋಟ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತಮ ಬಜೆಟ್‌ ಮಂಡಿಸಲು ತಯಾರಿ ನಡೆಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಜತೆಗೆ 2 ಸಭೆಗಳನ್ನು ನಡಸಿದ್ದು, ರಾಜ್ಯದ ಆರ್ಥಿಕ ಸಬಲೀಕಣದ ಜತೆಗೆ ಹಿಂದುಳಿದ ವರ್ಗಗಳಿಗೆ ನ್ಯಾಯ ಕೊಡುವಂತಹ ಹಾಗೂ ಜನರು ಮೆಚ್ಚುವಂತಹ ಉತ್ತಮ ಬಜೆಟ್‌ ಮಂಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಹಾಸ್ಟೆಲ್‌ಗಳನ್ನು ಸಬಲೀಕರಣಗೊಳಿಸಲಾಗುವುದು, ಆಹಾರ ಸರಬರಾಜು ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷಗಳನ್ನು ಸರಿಪಡಿಸಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು. ಅಸ್ಪೃಶ್ಯತೆ ನಿವಾರಣೆಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಕೋಟ ತಿಳಿಸಿದರು.

ಇದಕ್ಕೂ ಮುನ್ನ ‌ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪಕ್ಷವನ್ನು ಸಂಘಟಿಸುವ ಕುರಿತು ಕಾರ್ಯಕರ್ತರಿಗೆ ಸಲಹೆ ಸೂಚನೆಗಳನ್ನು ನೀಡಿದರು. ನೋಟು ಅಮಾನ್ಯೀಕರಣದಿಂದಾಗಿರುವ ಪ್ರಯೋಜನ, ಹಿಜಾಬ್‌ ವಿವಾದದಲ್ಲಿ ಬಿಜೆಪಿ ತೆಗೆದುಕೊಂಡಿರುವ ನಿಲುವುಗಳನ್ನು ಜನರಿಗೆಮುಟ್ಟಿಸಬೇಕು ಎಂದು ಕಿವಿಮಾತು ಹೇಳಿದರು. ಬಳಿಕ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

‘ನವೀನ್ ಸಾವು ದುರದೃಷ್ಟಕರ’

ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಹಾವೇರಿ ಜಿಲ್ಲೆಯ ನವೀನ್‌ ಶೆಲ್ ದಾಳಿಯಲ್ಲಿ ಮೃತಪಟ್ಟಿರುವುದು ನೋವಿನ ಸಂಗತಿ. ಉಕ್ರೇನ್‌ನಲ್ಲಿ ಸಿಲುಕಿರುವ ದೇಶವಾಸಿಗಳನ್ನು ತಾಯ್ನಾಡಿಗೆ ಕರೆತರಲು ಪ್ರಧಾನಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ. ಕೇಂದ್ರ ಸಚಿವರನ್ನೊಳಗೊಂಡ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಶೀಘ್ರವೇ ಉಕ್ರೇನ್‌ನಲ್ಲಿರುವ ಎಲ್ಲ ಭಾರತೀಯ ವಿದ್ಯಾರ್ಥಿಗಳನ್ನು ಹಾಗೂ ನಾಗರಿಕರನ್ನು ಕರೆತರಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು