ಉಡುಪಿ: ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕರು ಪ್ರಯಾಣಿಸುವ ಬಸ್ಸುಗಳಲ್ಲಿ ಸರಕು ಸಾಗಣೆ ಹೆಚ್ಚಾಗಿದ್ದು ಸರ್ಕಾರಕ್ಕೆ ತೆರಿಗೆ ವಂಚಿಸುವ ಸಲುವಾಗಿ ಬಸ್ಸುಗಳಲ್ಲೇ ಹಲವಾರು ಟನ್ ತೂಕದ ಸರಕು ಸಾಗಣೆ ಮಾಡಲಾಗುತ್ತಿದ್ದು ಸುಪ್ರೀಂ ಕೋರ್ಟ್ ನಿಯಮಗಳ ಪ್ರಕಾರ ಇದು ನಿಷಿದ್ಧವಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳೀಯರಿಂದ ಮಾಹಿತಿ ಪಡೆದ ಉಡುಪಿಯ ವಾಣಿಜ್ಯ ತೆರಿಗೆ ಅಧಿಕಾರಿ ಭರತ್ ಕುಮಾರ್ ಹೆಗ್ಡವಿಶಾಲ್ ಟ್ರಾವೆಲ್ಸ್ ಸೇರಿದಂತೆ ಹಲವು ಬಸ್ ಗಳ ಮೇಲೆ ದಾಳಿ ಮಾಡಿದ್ದು 50 ಲಕ್ಷಕ್ಕೂ ಅಧಿಕ ಮೌಲ್ಯದ ಸರಕುಗಳನ್ನು ವಶಪಡಿಸಿಕೊಂಡಿದ್ದಾರೆ.ವಾಣಿಜ್ಯ ತೆರಿಗೆ ಇಲಾಖೆಯ ಇತಿಹಾಸದಲ್ಲೇ ಇಷ್ಟು ದೊಡ್ಡ ದಾಳಿ ಇದೇ ಮೊದಲಾಗಿದ್ದು ನಿಷ್ಠಾವಂತ ಅಧಿಕಾರಿ ಭರತ್ ಕುಮಾರ್ ಹೆಗ್ಡೆ ಬಗ್ಗೆ ಎಲ್ಲೆಡೆ ಪ್ರಶಂಸೆ ಕೇಳಿಬರುತ್ತಿದೆ.
ವಾಣಿಜ್ಯ ತೆರಿಗೆ ಇಲಾಖೆಯ ಇತಿಹಾಸದಲ್ಲೇ ಇಷ್ಟು ದೊಡ್ಡ ದಾಳಿ ಇದೇ ಮೊದಲಾಗಿದ್ದು ನಿಷ್ಠಾವಂತ ಅಧಿಕಾರಿ ಭರತ್ ಕುಮಾರ್ ಹೆಗ್ಡೆ ಬಗ್ಗೆ ಎಲ್ಲೆಡೆ ಪ್ರಶಂಸೆ ಕೇಳಿಬರುತ್ತಿದೆ.