News Karnataka Kannada
Saturday, May 04 2024
ಉಡುಪಿ

ವೀರ ಸಾವರ್ಕರ್‌ಗೆ ಕಾಂಗ್ರೆಸ್ ಯಾವತ್ತೂ ಗೌರವ ಕೊಟ್ಟಿಲ್ಲ: ಸುನಿಲ್ ವಾಗ್ದಾಳಿ

Sunil Kumar 07082021
Photo Credit :

ಉಡುಪಿ: ವೀರ ಸಾವರ್ಕರ್‌ಗೆ ಕಾಂಗ್ರೆಸ್ ಯಾವತ್ತೂ ಗೌರವ ಕೊಟ್ಟಿಲ್ಲ. ಕಾಂಗ್ರೆಸ್‍ನ ಮರಿಮೊಮ್ಮಕ್ಕಳು ಕೂಡ ಅವರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಅಂಡಮಾನ್ ನಿಕೋಬಾರ್‌ನಲ್ಲಿರುವ ಸಾವರ್ಕರ್ ಹೆಸರನ್ನು ತೆಗೆದು ಹಾಕಲು ಕಾಂಗ್ರೆಸ್ ನಿರ್ಧರಿಸಿತ್ತು. ಮಣಿಶಂಕರ್ ಅಯ್ಯರ್ ಈ ಕೃತ್ಯಕ್ಕೆ ಮುಂದಾಗಿದ್ದರು.  ಹೋರಾಟದಲ್ಲಿ ನೂರಾರು ದಿನಗಳ ಕಾಲ ಜೈಲಿನಲ್ಲಿದ್ದ ವ್ಯಕ್ತಿ ಸಾವರ್ಕರ್. ಸಾವರ್ಕರ್‌ಗೆ ಕಾಂಗ್ರೆಸ್ ಯಾವತ್ತೂ ಗೌರವ ಕೊಟ್ಟಿಲ್ಲ. ಕಾಂಗ್ರೆಸ್‍ನ ಮರಿಮೊಮ್ಮಕ್ಕಳು ಕೂಡ ಅವರಿಗೆ ಅಪಮಾನ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಸ್ವಾತಂತ್ರ ಹೋರಾಟಗಾರರಿಗೆ ಇವರು ಗೌರವ ಕೊಡಲ್ಲ. ದೇಶ ಮೊದಲು ಎಂಬ ಕಲ್ಪನೆಯನ್ನು ಇವರಿಂದ ನಿರೀಕ್ಷಿಸಲು ಸಾಧ್ಯವೇ ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.

‘ಯಾವುದೇ ಟೀಕೆಗಳು ಎಲ್ಲೆಯನ್ನು ಮೀರಬಾರದು. ಟೀಕಿಸುವಾಗ ಬಳಸುವ ಶಬ್ದ ಪ್ರಯೋಗಗಳನ್ನು ಜನ ಗಮನಿಸುತ್ತಾರೆ. ಮಾತಿನಿಂದ ನಮ್ಮ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ವಾಜಪೇಯಿ ವ್ಯಕ್ತಿತ್ವ ಯಾವ ರೀತಿಯದ್ದು ಎಲ್ಲರಿಗೂ ಗೊತ್ತಿದೆ. ಅಜಾತಶತ್ರು ಎಂದು ಅವರೇ ಅವರನ್ನು ಕರೆಸಿಕೊಂಡದ್ದಲ್ಲ. ಜನ ಅವರನ್ನು ಅಜಾತ ಶತ್ರು ಎಂದು ಕರೆಯುತ್ತಿದ್ದರು. ವಾಜಪೇಯಿ ಬಗ್ಗೆ ಮಾತನಾಡಿದರೆ ಅವರ ವ್ಯಕ್ತಿತ್ವ ತೋರಿಸುತ್ತದೆ. ವಾಜಪೇಯಿಗೆ ಇದರಿಂದ ಯಾವುದೇ ನಷ್ಟವಿಲ್ಲ. ಟೀಕಿಸುವ ಪ್ರತಿಯೊಬ್ಬರಿಗೂ ಈ ಮಾತು ಅನ್ವಯವಾಗುತ್ತದೆ’ ಎಂದು ಪ್ರಿಯಾಂಕ ಖರ್ಗೆಗೆ ತಿರುಗೇಟು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು