ಅಜೆಕಾರು: ನುರಿತ ಡೀಸೇಲ್ ಮೆಕಾನಿಕ್, ಅಜೆಕಾರಿನಲ್ಲಿ ೨೫ ವರ್ಷಗಳ ಸಾರ್ಥಕ ಸೇವೆಗೈದ, ಚೈತನ್ಯಶ್ರೀ ಕರ್ನಾಟಕ ರತ್ನ ಗೌರವಕ್ಕೆ ಪಾತ್ರರಾದ ಸಾಣೂರು ಅರುಣ್ ಶೆಟ್ಟಿಗಾರ್ ಅಜೆಕಾರ ಅವರನ್ನು ಮಮತಾ ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರದ ವತಿಯಿಂದ ಅಜೆಕಾರು ಶ್ರೀ ರಾಮ ಮಂದಿರದಲ್ಲಿ ಸನ್ಮಾನಿಸಲಾಯಿತು.
ವಿಶ್ರಾಂತ ಜಿಲ್ಲಾ ಯುವಜನ ಇಲಾಖೆಯ ಸಹಾಯಕ ನಿರ್ದೇಶಕ ಪಿ.ಕರುಣಾಚಂದ್ರ ಅವರು ಸನ್ಮಾನ ನೆರವೇರಿಸಿ ಪ್ರತಿಯೊಬ್ಬರೂ ತಮ್ಮ ತಮ್ಮ ವೃತ್ತಿಯಲ್ಲಿ ಪ್ರಾವೀಣ್ಯತೆ ಪಡೆಯುವುದೇ ನಿಜವಾದ ಸಾಧನೆ, ಅರುಣ್ ಅವರು ವೃತ್ತಿ ಸಾಧನೆಯ ಜೊತೆಗೆ ಸಂಘ ಸಂಸ್ಥೆಗಳನ್ನು ಮತ್ತು ಕ್ರೀಡಾ ಚಟುವಟಿಕೆಗಳನ್ನು ಸತತ ಪ್ರೋತ್ಸಾಹಿಸುತ್ತಾ ಬಂದಿದ್ದಾರೆ ಎಂದರು.
ಅಂತಾರಾಷ್ಟ್ರೀಯ ಕ್ರೀಡಾಪಟು ವಿದ್ಯಾ ಪೈ, .ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಹರೀಶ್ ನಾಯಕ್, ನಂದಕುಮಾರ್ ಹೆಗ್ಡೆ, ಸುಭಾಶ್ಚಂದ್ರ ಹೆಗ್ಡೆ, ಪ್ರಶಾಂತ್ ಶೆಟ್ಟಿ, ಸತ್ಯೇಂದ್ರ ಕಿಣಿ, ರಾಮಕೃಷ್ಣ ಹೆಗ್ಡೆ, ರವಿ ಹೆರ್ಮುಂಡೆ, ಗುರುಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ…
ಕೇಂದ್ರ ಸಚಿವ ಭಗವಂತ ಖೂಬಾ ಅವರು ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ವಿರೋಧಿಯಾಗಿದ್ದು, ಲಿಂಗಾಯತ ಧರ್ಮೀಯರು ಲೋಕಸಭೆ ಚುನಾವಣೆಯಲ್ಲಿ ಅವರನ್ನು…
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಗ ಎಚ್.ಡಿ.ರೇವಣ್ಣ, ಅವರ ಮೊಮ್ಮಗ ಪ್ರಜ್ವಲ್ ರೇವಣ್ಣನ ಕರ್ಮಕಾಂಡಗಳಿಂದ ರಾಜ್ಯದ ಮಾನ ಹರಾಜಾಗಿದೆ. ಸಾವಿರಾರು ಮಹಿಳೆಯರ…
ಮರಾಠ ಸಮಾಜಕ್ಕೆ ಬಿಜೆಪಿ ಕೊಡುಗೆ ಬಹಳ ದೊಡ್ಡದಿದೆ' ಎಂದು ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ…
ಭಾರತೀಯ ಅಡುಗೆಮನೆಗಳಲ್ಲಿ ಎಣ್ಣೆ ಅತ್ಯಗತ್ಯ. ಹೆಚ್ಚಿನ ಭಾರತೀಯ ಆಹಾರ ಉತ್ಪನ್ನಗಳಲ್ಲಿ ತೈಲವು ಪ್ರಮುಖ ಅಂಶವಾಗಿದೆ. ಹೀಗಾಗಿ ಎಷ್ಟೋ ಜನ ಬಳಸುವ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ…