News Karnataka Kannada
Monday, April 29 2024
ಉಡುಪಿ

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ: ಶಾಸಕ ರಘುಪತಿ ಭಟ್ ಗೆ ಜೀವ ಬೆದರಿಕೆ ಕರೆ

Raghupathi Bhat
Photo Credit : News Kannada

ಉಡುಪಿ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇದೀಗ ಉಡುಪಿ ಶಾಸಕ ರಘುಪತಿ ಭಟ್ ಗೆ ವಿದೇಶಗಳಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ, ನನಗೆ ನಿರಂತರವಾಗಿ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಹಾಗಂತ ನಾನು ಹೆದರಿ ಕೂರುವ ವ್ಯಕ್ತಿಯಲ್ಲ. ನನ್ನ ಜತೆಗೂ ಸಾಕಷ್ಟು ಜನರಿದ್ದಾರೆ ಎಂದು ತಿಳಿಸಿದ್ದಾರೆ.

ಜೀವ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಶಾಸಕ ರಘುಪತಿ ಭಟ್, ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಮಾಹಿತಿ ನೀಡಿದ್ದು, ರಾಜ್ಯ, ಹೊರರಾಜ್ಯ ಹಾಗೂ ವಿದೇಶಗಳಿಂದ ನಿರಂತರ ಫೋನ್ ಕರೆ ಹಾಗೂ ಇಂಟರ್ ನೆಟ್ ಮೂಲಕ ಕರೆ ಮಾಡಿ ದುಷ್ಕರ್ಮಿಗಳು ಬೆದರಿಕೆಯೊಡ್ದುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕರು,ಮುಸ್ಲೀಮರಿಗೆ ಸಮಸ್ಯೆಗಳಿಲ್ಲ, ಕೇವಲ ಆರು ಮಕ್ಕಳ ತಲೆ ಕೆಡಿಸಿದ್ದಾರೆ ಅಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯ ಮುಸ್ಲೀಂ ಒಕ್ಕೂಟ ಖಾಜಿಗಳು, ಬೆಂಗಳೂರು ಭಾಗದ ಮುಸ್ಲೀಂರು ನನಗೆ ಬೆಂಬಲ ನೀಡಿದ್ದಾರೆ. ನನ್ನ ಬಳಿ ಯಾವ ಗನ್ ಮ್ಯಾನ್ ಇಲ್ಲ, ಮನೆಗೆ ಸೆಕ್ಯೂರಿಟಿ ಕೂಡ ಇಲ್ಲ. ಉಡುಪಿ ಕ್ಷೇತ್ರದ ಜನತೆಯೇ ನನಗೆ ಸೆಕ್ಯುರಿಟಿ. ಆದರೆ ಮುಂಜಾಗೃತಾ ಕ್ರಮವಾಗಿ ಪೊಲೀಸ್ ವರಿಷ್ಠಾಧಿಕಾರಿಗಳು ಗನ್ ಮ್ಯಾನ್ ಕಳುಹಿಸಿದ್ದಾರೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು