News Karnataka Kannada
Monday, April 29 2024
ಉಡುಪಿ

ಅಪಘಾತಕ್ಕೀಡಾದ ರೈಲಿನಲ್ಲಿದ್ದರು ಕಳಸದ 110 ಮಂದಿ, ಬೋಗಿ ಶಿಫ್ಟ್‌ ಆದ ಕಾರಣ ಮೃತ್ಯು ದವಡೆಯಿಂದ ಬಚಾವು

110 people on board the train, which met with the accident, were lucky to escape the mouth of death as the coach shifted.
Photo Credit : Pixabay

ಕಾರ್ಕಳ: ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ಅಪಘಾತಕ್ಕೀಡಾದ ಬೆಂಗಳೂರು-ಹೌರ ಸೂಪರ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕಳಸದ 110 ಮಂದಿ ಇದ್ದರು. ಈ ಪ್ರಯಾಣಿಕರು ಅದೃಷ್ಟವಶಾತ್‌ ಮೃತ್ಯು ದವಡೆಯಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಬೈಯಪ್ಪನಹಳ್ಳಿ ಸರ್​​ ಎಂ. ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್​​​​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಬೆಂಗಳೂರಿನಿಂದ ಕೊನೆಯ S5, S6, S7 ಬೋಗಿಯಲ್ಲಿ ಇದ್ದರು.

ರೈಲು ನಿನ್ನೆ ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್​ ಬದಲಿಸಿದೆ. ಇದರಿಂದಾಗಿ ಕೊನೆಯ ಬೋಗಿ ಮೊದಲ ಬೋಗಿಯಾಗಿದೆ. ಕಳಸ ತಾಲೂಕಿನ 110 ಜನ ರೈಲಿನ ಮೊದಲ ಬೋಗಿಗೆ ಶಿಫ್ಟ್ ಆಗಿದ್ದರು. ಮೊದಲ ಬೋಗಿಗೆ ಶಿಫ್ಟ್ ಆದ ಹಿನ್ನೆಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕೊನೆಯ 4 ಬೋಗಿಗಳಿಗೆ ರೈಲು ಡಿಕ್ಕಿ ಹೊಡೆದಿದೆ. ಇನ್ನು ಈ ನಿಲ್ದಾಣದ ರೈಲಿನಲ್ಲಿ 1294 ಪ್ರಯಾಣಿಕರು ತೆರಳಿದ್ದರು. 1294 ಪ್ರಯಾಣಿಕರ ಪೈಕಿ 994 ಜನ ಟಿಕೆಟ್‌ ಬುಕ್ ಮಾಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು