ಉಡುಪಿ: ಇಲ್ಲಿನ ದೊಡ್ಡಣಗುಡ್ಡೆ ಡಾ. ಎ.ವಿ ಬಾಳಿಗಾ ಸ್ಮಾರಕ ಆಸ್ಪತ್ರೆಯಲ್ಲಿ ಜ.1 ರಿಂದ ಜ.10 ರ ವರೆಗೆ 31ನೇ ವರ್ಷದ ಮದ್ಯವ್ಯಸನ ವಿಮುಕ್ತಿ ಶಿಬಿರವು ನಡೆಯಲಿದೆ ಎಂದು ವಿರೂಪಾಕ್ಷ ದೇವರಮನೆ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಬಿರದ ಉದ್ಘಾಟನೆಯು ಜ.1 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಮದ್ಯವ್ಯಸನ ವಿಮುಕ್ತಿ ಶಿಬಿರವನ್ನು ಪ್ರಸಾದ್ ಸೇತ್ರಾಲಯದ ನೇತ್ರತಜ್ಞರು ಮತ್ತು ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣ ಪ್ರಸಾದ್ ಅವರು ಉದ್ಘಾಟಿಸಲಿದ್ದಾರೆ ಎಂದರು. ಕೆ.ಎಂ.ಸಿಯ ಸಮುದಾಯ ಆರೋಗ್ಯ ವಿಭಾಗದ ಸಹಾಯ ಪ್ರಾಧ್ಯಾಪಕ ಡಾ. ಮುರುಳಿಧರ್ ಎಂ.ಕುಲಕರ್ಣಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಡಾ. ಎ.ವಿ.ಬಾಳಿಗಾ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ ಭಂಡಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಶಿಬಿರದ ಸಮಾರೋಪ ಸಮಾರಂಭವು ಜ.10 ರಂದು ಬೆಳಿಗ್ಗೆ ನಡೆಯಲಿದೆ ಎಂದು ತಿಳಿಸಿದರು.
ಶಿಬಿರಕ್ಕೆ ದಾಖಲಾಗುವ ಶಿಬಿರಾರ್ಥಿಗಳಿಂದ 500 ರೂ. ಶುಲ್ಕವನ್ನು ಪಡೆಯುತ್ತಿದ್ದು, ಶಿಬಿರಾರ್ಥಿಗಳಿಗೆ ತಗಲುವ ಊಟ, ವಸತಿ, ಚಿಕಿತ್ಸೆಯ ವೆಚ್ಚವನ್ನು ಕಮಲ್ ಎ. ಬಾಳಿ ಚಾರಿಟೇಬಲ್ ಟ್ರಸ್ಟ್ ಭರಿಸುತ್ತಿದೆ ಎಂದು ಮಾಹಿತಿ ನೀಡಿದರು.