Categories: ಉಡುಪಿ

ಫೆ.11ರಂದು 6ನೇ ಆವೃತ್ತಿಯ ‘ಮಣಿಪಾಲ ಮ್ಯಾರಥಾನ್’: ದೇಶ- ವಿದೇಶಗಳಿಂದ 15,000 ಸ್ಪರ್ಧಿಗಳು ಭಾಗಿ

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಸಂಸ್ಥೆಯು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಸಹಭಾಗಿತ್ವದಲ್ಲಿ ಆಯೋಜಿಸಿರುವ ಮಣಿಪಾಲ ಮ್ಯಾರಥಾನ್‌ನ ಆರನೇ ಆವೃತ್ತಿ ಫೆ.11ರಂದು ಮಣಿಪಾಲದಲ್ಲಿ ನಡೆಯಲಿದೆ.

ಈ ಬಾರಿ ವಿವಿಧ ವಿಭಾಗಗಳಲ್ಲಿ ದೇಶ- ವಿದೇಶಗಳ ಸುಮಾರು 15,000ದಷ್ಟು ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದು ಮಣಿಪಾಲ ಮಾಹೆಯ ಪ್ರೊ. ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ತಿಳಿಸಿದ್ದಾರೆ.

ಮಣಿಪಾಲದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಅಮೆರಿಕ, ಜಪಾನ್, ಫ್ರಾನ್ಸ್, ಟರ್ಕಿ ಸೇರಿ ಒಟ್ಟು ಎಂಟು ದೇಶಗಳ 100ಕ್ಕೂ ಅಧಿಕ ಮಂದಿ ಮಣಿಪಾಲ ಮ್ಯಾರಥಾನ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಉಳಿದಂತೆ ಇಥಿಯೋಪಿಯಾ, ಕೀನ್ಯಾ, ಜರ್ಮನಿ, ಇಂಗ್ಲಂಡ್ ಹಾಗೂ ಆಸ್ಟ್ರೇಲಿಯಾಗಳಿಂದಲೂ ದೂರದ ಓಟಗಾರರು ಭಾಗವಹಿಸುವರು ಎಂದರು.

ಮಣಿಪಾಲದಲ್ಲಿ ಪೂರ್ಣ ಮ್ಯಾರಥಾನ್ (42.195ಕಿ.ಮೀ.), ಹಾಫ್ ಮ್ಯಾರಥಾನ್ (21.098), 10ಕಿ.ಮೀ, 5ಕಿ.ಮೀ, 3ಕಿ.ಮೀ. ವಿಭಾಗಗಳಲ್ಲಿ ನಡೆಯಲಿದೆ. ಅಲ್ಲದೇ 3 ಕಿ.ಮೀ.ನ ಫನ್ ರೇಸ್ ಸಹ ನಡೆಯಲಿದೆ. ಮೊದಲೆರಡು ವಿಭಾಗಗಳನ್ನು ಬಿಟ್ಟು ಉಳಿದ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ವಯೋವರ್ಗಗಳೂ ಸೇರಿದಂತೆ ವಿವಿಧ ಉಪವಿಭಾಗಗಳಿರುತ್ತವೆ. ಪೂರ್ಣ ಮ್ಯಾರಥಾನ್ ಫೆ.11ರ ಮುಂಜಾನೆ 5 ಗಂಟೆಗೆ ಮಣಿಪಾಲ ಗ್ರೀನ್ಸ್‌ನಿಂದ ಪ್ರಾರಂಭಗೊಳ್ಳಲಿದೆ. ಬಳಿಕ ಹಂತ ಹಂತವಾಗಿ ಉಳಿದ ಸ್ಪರ್ಧೆಗಳಿಗೆ ಹಸಿರು ನಿಶಾನೆ ತೋರಲಾಗುವುದು ಎಂದು ತಿಳಿಸಿದರು.

ಇದೇ ಮೊದಲ ಬಾರಿಗೆ ಬೆಂಗಳೂರಿನ ಸಮರ್ಥನಂ ಟ್ರಸ್ಟ್ ಮೂಲಕ ಸುಮಾರು 200 ಮಂದಿ ಅಂಧರು ಹಾಗೂ ಕರ್ನಾಟಕದ ವಿವಿಧೆಡೆಗಳಿಂದ ಸುಮಾರು 150 ಮಂದಿ ವಿಶೇಷ ಚೇತನರು ಮಣಿಪಾಲ ಮ್ಯಾರಥಾನ್‌ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರಲ್ಲಿ ಒಬ್ಬರು ಪೂರ್ಣ ಮ್ಯಾರಥಾನ್ (42.19ಕಿ.ಮೀ.) ಸ್ಪರ್ಧೆಯಲ್ಲಿ ಪಾಲ್ಗೊಂಡರೆ, ಇಬ್ಬರು ಹಾಫ್ ಮ್ಯಾರಥಾನ್ (21.098ಕಿ.ಮೀ.)ನಲ್ಲಿ ಆರು ಮಂದಿ 10ಕಿ.ಮೀ. ಓಟದಲ್ಲಿ ಭಾಗವಹಿಸಲಿದ್ದಾರೆ. ಉಳಿದವರು ಇತರ ಸ್ಪರ್ಧೆಯಲ್ಲಿ ಸ್ಪರ್ಧಿಸುವರು ಎಂದು ವಿವರಿಸಿದರು.

21 ಲಕ್ಷರೂ. ಬಹುಮಾನ ನಿಧಿ: ಮ್ಯಾರಥಾನ್‌ನಲ್ಲಿ ವಿವಿಧ ವಿಭಾಗಗಳ ವಿಜೇತರಿಗೆ ಒಟ್ಟು 21 ಲಕ್ಷರೂ. ಮೊತ್ತವನ್ನು ಬಹುಮಾನವಾಗಿ ನೀಡಲಾಗುತ್ತದೆ. ಪೂರ್ಣ ಮ್ಯಾರಥಾನ್‌ನ ಮೊದಲ ಮೂರು ಸ್ಥಾನಿಗಳಿಗೆ ಕ್ರಮವಾಗಿ 50ಸಾವಿರ, 30ಸಾವಿರ, 20 ಸಾವಿರ ಬಹುಮಾನವಿದ್ದರೆ, ಹಾಫ್ ಮ್ಯಾರಥಾನ್‌ಗೆ 30ಸಾವಿರ, 20ಸಾವಿರ, 10ಸಾವಿರ ರೂ.ನಗದು ಬಹುಮಾನವಿದೆ.

ಉಳಿದಂತೆ 10ಕಿ.ಮೀ. ವಿಜೇತರಿಗೆ 15,000ರೂ., 5ಕಿ.ಮೀ. ವಿಜೇತರಿಗೆ 7,000ರೂ., 3ಕಿ.ಮೀ. ವಿಜೇತರಿಗೆ 4,000ರೂ. ನಗದು ಬಹುಮಾನ ನೀಡಲಾಗುವುದು. ಈ ಬಾರಿ ಸ್ಪರ್ಧೆ ವಿಜೇತರನ್ನು ಘೋಷಿಸುತಿದ್ದಂತೆ ಬಹುಮಾನ ವಿತರಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಹೆಯ ಉಪಕುಲಪತಿ ಡಾ. ಎಂ.ಡಿ. ವೆಂಕಟೇಶ್, ಸಹ ಉಪಕುಲಪತಿಗಳಾದ ಡಾ.ಶರತ್ ರಾವ್, ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕೆಂಪರಾಜ್, ಡಾ.ಗಿರೀಶ್ ಮೆನನ್, ಡಾ.ನವೀನ್ ಸಾಲಿಸ್, ಡಾ.ಅವಿನಾಶ್ ಶೆಟ್ಟಿ, ಡಾ. ವಿನೋದ್ ಉಪಸ್ಥಿತರಿದ್ದರು.

Ashika S

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

1 hour ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago