News Karnataka Kannada
Monday, April 29 2024
ಉಡುಪಿ

ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಉಡುಪಿ ಶಾಸಕರ ನೇತೃತ್ವದ ಮೀನುಗಾರರ ನಿಯೋಗ

A delegation of fishermen led by Udupi MLA meets Basavaraj Bommai
Photo Credit : News Kannada

ಉಡುಪಿ: ಮೀನುಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಮೀನುಗಾರರ ನಿಯೋಗ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಯಾಂತ್ರಿಕ ಮೀನುಗಾರಿಕಾ ದೋಣಿಗಳಿಗೆ ಡೀಸೆಲ್ ಪ್ರಮಾಣ 500 ಲೀಟರ್ ಗೆ ಹೆಚ್ಚಿಸುವುದು, ಟೆಬ್ಮಾ ಶಿಫ್ ಯಾರ್ಡ್ ನ್ನು ಮಲ್ಪೆ ಮೀನುಗಾರಿಕೆಗೆ ಬಿಟ್ಟುಕೊಡುವುದು, ನಾಡದೋಣಿಯವರಿಗೆ 400 ಲೀಟರ್ ನಂತೆ ಸೀಮೆಎಣ್ಣೆಯ ಪೂರೈಕೆ ಮಾಡುವುದು, ನಾಡ ದೋಣಿಯವರಿಗೆ ತಂಗುದಾಣ ನಿರ್ಮಿಸುವುದು, ಯಶಸ್ವಿನಿ ಯೋಜನಾ ಸೌಲಭ್ಯ ವಿಸ್ತರಿಸುವುದು, ಮೀನುಗಾರ ಮಹಿಳೆಯರಿಗೆ ಒಣ ಮೀನು ಒಣಗಿಸಲು ಗುತ್ತಿಗೆ ಆಧಾರದಲ್ಲಿ ನಿವೇಶನ ನೀಡುವುದು. ಮೀನುಗಾರಿಕಾ ಚಟುವಟಿಕೆ ಹಾಗೂ ಮೀನುಗಾರಿಕಾ ಅಭಿವೃದ್ಧಿಗೆ ಅನುದಾನ ಒದಗಿಸುವುದು ಈ ಮೊದಲಾದ ಬೇಡಿಕೆಗಳ ಕುರಿತು ಮನವಿ ಸಲ್ಲಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು