Categories: ಉಡುಪಿ

ಕೊಲ್ಲುವ ಮನಸ್ಥಿತಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು: ಸುಧೀರ್ ಕುಮಾರ್ ಮುರೊಳ್ಳಿ

ಉಡುಪಿ: ಕೊಲ್ಲುವ ಮನಸ್ಥಿತಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು. ಒಂಬತ್ತು ಪುಟಗಳ ಕ್ರಿಮಿನಲ್ ಕೇಸುಗಳ ವರದಿ ಇರುವ ವ್ಯಕ್ತಿ ಉಡುಪಿಯ ಶಾಸಕನಾಗಬಾರದು. ಪುಂಡಾಟಿಕೆಯಲ್ಲಿ ಮುಂಚೂಣಿಯಲ್ಲಿದ್ದ ವ್ಯಕ್ತಿ ಉಡುಪಿಯ ಶಾಸಕನಾಗುತ್ತಾನೆಂದರೆ ಅದು ಉಡುಪಿಯ ಸ್ವಾಭಿಮಾನದ ಪ್ರಶ್ನೆ.” ಎಂದು ಕಾಂಗ್ರೆಸ್ ವಕ್ತಾರ ಸುಧೀರ್ ಕುಮಾರ್  ಮುರೊಳ್ಳಿ ಹೇಳಿದ್ದಾರೆ.

ಪರ್ಕಳದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿ ಮತ್ತು ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು.

” ಬಿಜೆಪಿಗೆ ನೂರು ಜನ್ಮವೆತ್ತಿ ಬಂದರೂ ಕಾಂಗ್ರೆಸ್ ಮುಕ್ತ ಮಾಡಲು ಸಾಧ್ಯವಿಲ್ಲ. ಕ್ಷೀರ ಭಾಗ್ಯ, ಅನ್ನ ಭಾಗ್ಯ, ಲ್ಯಾಪ್ಟಾಪ್, ಶೂ ಭಾಗ್ಯ, ಮನಸ್ವಿನಿ ಮುಂತಾದ 167 ಭರವಸೆಯನ್ನು ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಈಡೇರಿಸಿದೆ. ಮನೆ (ನಿವೇಶನ), ಸಾಲಮನ್ನಾ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಉದ್ಯೋಗ ಕೊಡಿ ಅಂದರೆ ಬಿಜೆಪಿಗರು ಜಟ್ಕಾ-ಹಲಾಲ್ ಕಟ್, ಹಿಜಾಬ್-ಅಜಾನ್ ಎನ್ನುತ್ತಾರೆ. ಗೋವಾದಲ್ಲಿ ಬಿಜೆಪಿ ಸರ್ಕಾರ ಶ್ರೀರಾಮ ಸೇನೆಯನ್ನು ನಿಷೇಧಿಸಿತ್ತು. ಇದಕ್ಕೆ ಬಿಜೆಪಿ ಉತ್ತರ ಕೊಡಬೇಕು.” ಎಂದರು.

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ” ಜನರಿಗೆ ನೀರಿಲ್ಲ, ಉದ್ಯೋಗವಿಲ್ಲ, ಡ್ರೈನೇಜ್ ಆಗಿಲ್ಲ ಎಂದು ಜನರು ಅಳುತ್ತಿದ್ದಾರೆ. ಇದೆಲ್ಲದಕ್ಕೂ ಪರಿಹಾರವಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಅನಿವಾರ್ಯತೆ ಇದೆ. ವರ್ಷದಲ್ಲಿ ಸುಮಾರು 27,000 ಯುವಕರು ಪದವಿ ಮುಗಿಸಿ ಹೊರಬರುತ್ತಾರೆ. ಯುವಕರ ಉದ್ಯೋಗಕ್ಕಾಗಿ ಯಾವುದೇ ಒಂದು  ಕೈಗಾರಿಕೆ ಸ್ಥಾಪಿಸಿಲ್ಲ. ಇಂತಹ  ಕಾರಣಕ್ಕೆ ಈ  ಭ್ರಷ್ಟ ಸರಕಾರವನ್ನು ಸೋಲಿಸಬೇಕು. ಪ್ರವಾಸೋದ್ಯಮದಲ್ಲಿ ಕಮಿಷನ್ ಏಜೆಂಟರಂತೆ ಬಿಜೆಪಿ ವರ್ತಿಸುತ್ತಿದೆ. ಬಿಜೆಪಿ ಮೀನುಗಾರಿಕಾ ಜಟ್ಟಿಯನ್ನು ಅಭಿವೃದ್ಧಿಪಡಿಸಿಲ್ಲ. ನಾಡದೋಣಿಗೆ ಸೀಮೆ ಎಣ್ಣೆ ನೀಡಲಿಲ್ಲ. ಕೃಷಿಕರಿಗೂ ಬಿಜೆಪಿ ಯಾವುದೇ ಉತ್ತೇಜನ ನೀಡಿಲ್ಲ.” ಎಂದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ್ ಶೆಣೈ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಸುಕೇಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

Sneha Gowda

Recent Posts

ಗದ್ದೆಗೆ ಆಕಸ್ಮಿಕ‌ ಬೆಂಕಿ : ತಪ್ಪಿದ ಭಾರೀ ಅನಾಹುತ

ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಲಾಜಿ ಲೇಔಟ್ ಹಾಗೂ ಕನ್ನರ್ಪಾಡಿ ಸೈಂಟ್ ಮೇರಿಸ್ ಶಾಲೆಯ ಬಳಿ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ…

2 mins ago

ಡ್ರಗ್ಸ್‌ ಕೊಟ್ಟು ಸಂಸದೆಗೆ ಲೈಂಗಿಕ ಕಿರುಕುಳ ಆರೋಪ : ಆಸ್ಟ್ರೇಲಿಯಾ ಎಂಪಿ

ಆಸ್ಟ್ರೇಲಿಯಾದ ಕ್ವೀನ್ಸ್‌ ಲ್ಯಾಂಡ್‌ ಸಂಸದೆ ಬ್ರಿಟಾನಿ ಲೌಗಾ ಅವರಿಗೆ ಕೆಲವು ಅಪರಿಚಿತರು ಮಾದಕ ದ್ರವ್ಯ ನೀಡಿ, ಲೈಂಗಿಕ ಕಿರುಕಳ ನೀಡಿರುವ…

12 mins ago

‘ಟೈಟಾನಿಕ್‌ʼ‘ಲಾರ್ಡ್ ಆಫ್ ರಿಂಗ್ಸ್ʼ ನಟ ಬರ್ನಾರ್ಡ್ ಹಿಲ್ ನಿಧನ

ಆಸ್ಕರ್‌ ಪುರಸ್ಕೃತ, ‘ಟೈಟಾನಿಕ್‌ʼ‘ಲಾರ್ಡ್ ಆಫ್ ರಿಂಗ್ಸ್ʼ ಪ್ರಸಿದ್ಧ ನಟ ಬರ್ನಾರ್ಡ್ ಹಿಲ್ ನಿಧನ ಹೊಂದಿದ್ದಾರೆ ಅವರಿಗೆ 79 ವಯಸ್ಸಾಗಿತ್ತು.1997ರಲ್ಲಿ ರಿಲೀಸ್…

35 mins ago

ಗೋಶಾಲೆ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು ರೈತರು ಪ್ರತಿಭಟನೆ

ಏಪ್ರಿಲ್ 25ರಿಂದ ಕೆ ವಿ ಎನ್ ದೊಡ್ಡಿ, ಎಂ ಟಿ ದೊಡ್ಡಿ ಗ್ರಾಮದ ಗೋಶಾಲೆಗಳಲ್ಲಿ ಜಾನುವಾರುಗಳಿಗೆ ಮೇವು ವಿತರಿಸಿಲ್ಲ ಎಂದು…

51 mins ago

ಭಾರಿ ಮಳೆ : 78 ಮಂದಿ ಸಾವು, 100ಕ್ಕೂ ಹೆಚ್ಚು ಜನ ನಾಪತ್ತೆ

ಬ್ರೆಜಿಲ್‌ನ ದಕ್ಷಿಣ ಭಾಗದಲ್ಲಿರು ರಿಯೋ ಗ್ರಂಡ್‌ ಡೊ ಸುಲ್‌ʼ ರಾಜ್ಯಲ್ಲಿ ಸುರಿದ ಬಾರಿ ಮಳೆಯಿಂದಾಗಿ ಪ್ರವಾಹ ಯಂಟಾಗಿದ್ದು ಈವರೆಗೂ 78…

1 hour ago

ಕಾಂಗ್ರೆಸ್‌ ಸಚಿವನ ಆಪ್ತನ ಮನೆಗೆ ಇಡಿ ದಾಳಿ : ಕಂತು ಕಂತು ಹಣದ ರಾಶಿ ಜಪ್ತಿ

ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಅಲಂ ಅವರ ಆಪ್ತ ಕಾರ್ಯದರ್ಶಿ ಮನೆಗೆ ಐಡಿ ರೈಡ್‌ ಮಾಡಿದ್ದು 30 ಕೋಟಿ ಅಧಿಕ ಹಣ…

2 hours ago