News Karnataka Kannada
Monday, April 29 2024
ಉಡುಪಿ

ಹದಗೆಟ್ಟ ಆದಿ ಉಡುಪಿ ಸಂತೆ ಮಾರುಕಟ್ಟೆಯ ರಸ್ತೆ: ಜನರ ಪರದಾಟ

Aadi Udupi market in a state of chaos: People have to walk on a muddy road
Photo Credit : News Kannada

ಉಡುಪಿ: ಆದಿಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆಯ ಮುಖ್ಯ ಮಾರುಕಟ್ಟೆ ಪ್ರಾಂಗಣ ಪ್ರವೇಶಿಸುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಗ್ರಾಹಕರು, ವ್ಯಾಪರಸ್ಥರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿ ಬುಧವಾರ ಇಲ್ಲಿ ವಾರದ ಸಂತೆ ನಡೆಯುತ್ತದೆ. ಸಾವಿರಾರು ಗ್ರಾಹಕರು ದಿನ ನಿತ್ಯದ ಬಳಕೆಗೆ ಬೇಕಾಗುವ ಹಣ್ಣು ಹಂಪಲು ತರಕಾರಿ, ಬೆಳೆ ಕಾಳು, ಸಾಂಬಾರು ಪದಾರ್ಥಗಳನ್ನು ಹಾಗೂ ಸ್ಥಳೀಯ ರೈತರು ಸಾವಯವವಾಗಿ ಬೇಳೆಸಿದಂತ ತಾಜಾ ತರಕಾರಿಗಳ ಖರೀದಿಸಲು ಬರುತ್ತಾರೆ. ಬಹಳಷ್ಟು ಹಿರಿಯ ನಾಗರಿಕರು ರಸ್ತೆ ಗುಂಡಿಯಲ್ಲಿ ಆಯತಪ್ಪಿ ಬಿದ್ದು ಗಾಯಾಳಾಗಿರುವ ಘಟನೆಗಳು ಇಲ್ಲಿ ನಡೆದಿದೆ.

ಸಾರ್ವಜನಿಕರು ಸಂಬಂಧಪಟ್ಟವರಲ್ಲಿ ಅಳಲು ಹೇಳಿಕೊಂಡರು ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಈ ಹಿನ್ನಲೆಯಲ್ಲಿ ಪ್ರತಿಭಟನೆಗೆ ಸಜ್ಜುಗೊಂಡಿರುವ ಸಾರ್ವಜನಿಕರು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಲ್ಲಿ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ.

ಜಿಲ್ಲಾಧಿಕಾರಿ, ಅಥವಾ ಅಪರ ಜಿಲ್ಲಾಧಿಕಾರಿಯವರು ಸಮಸ್ಯೆಯ ಸ್ಥಳವನ್ನು ಪರಿಶೀಲಿಸಿ, ವಾರದ ಸಂತೆ ಮಾರುಕಟ್ಟೆಯಲ್ಲಿ ಉದ್ಭವಿಸಿರುವ ಸಮಸ್ಯೆ ಬಗೆಹರಿಸಬೇಕೆಂದು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಆಗ್ರಹ ಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು