ಕಾರ್ಕಳ: ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವು ಆಗಸ್ಟ್ 12 ರಂದು ನಿಟ್ಟೆಯ ಎನ್ಆರ್ಎಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಮಿಲನ ಕಾರ್ಯಕ್ರಮ ಆಯೋಜಿಸಿದೆ.
ಮುಖ್ಯ ಅತಿಥಿಗಳಾಗಿ ನಿಟ್ಟೆ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮತ್ತು ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಎನ್ ವಿನಯ ಹೆಗ್ಡೆ ಪಾಲ್ಗೊಳ್ಳುವರು. ಟ್ರಸ್ಟಿ, ವಿಶಾಲ್ ಹೆಗ್ಡೆ, ನಿಟ್ಟೆ ಶಿಕ್ಷಣ ಟ್ರಸ್ಟ್ ಮತ್ತು ಪ್ರೊ-ಚಾನ್ಸೆಲರ್ (ಆಡಳಿತ) ನಿಟ್ಟೆ ಡಿಯು ಮತ್ತು ನಿಟ್ಟೆ ಡಿಯು ಆಫ್ ಕ್ಯಾಂಪಸ್ ಸೆಂಟರ್ನ ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ನಿರ್ದೇಶಕ ಎ ಯೋಗೀಶ್ ಹೆಗ್ಡೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮವು ಔಪಚಾರಿಕ ವೇದಿಕೆ ಕಾರ್ಯಕ್ರಮ, ಕ್ಯಾಂಪಸ್ ವಿಸಿಟ್, ಫ್ಯಾಕಲ್ಟಿ-ಹಳೆ ವಿದ್ಯಾರ್ಥಿಗಳ ಸಂವಾದ, ಗುಂಪು ಫೋಟೋಗಳು, ಸಾಂಸ್ಕೃತಿಕ ಕಾರ್ಯಕ್ರಮ ಒಳಗೊಂಡಿದೆ. ಭಾರತದ ಎಲ್ಲಾ ಭಾಗಗಳಲ್ಲಿರುವ 400 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಭೇಟಿ ನೀಡುತ್ತಿರುವುದು ಹೆಮ್ಮೆಯ ಕ್ಷಣವಾಗಿದೆ. ಕಾರ್ಯಕ್ರಮವನ್ನು ಎನ್ಆರ್ಎಎಂಪಿ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಂಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.