ಉಡುಪಿ: ಉಚಿತ ಯೋಜನೆಗಳಿಂದ ದೇಶ ಎಷ್ಟು ಬರ್ಬಾದ್ ಆಗುತ್ತದೆ ಎಂದು ಲೆಕ್ಕಾಚಾರ ಹಾಕಬೇಕಾಗುತ್ತದೆ. ಆಂಧ್ರ ಸರಕಾರ ಹಲವು ಉಚಿತ ಕೊಟ್ಟಿತ್ತು. ಈಗ ಸಂಬಳ ಕೊಡಲು ಅವರಲ್ಲಿ ದುಡ್ಡಿಲ್ಲ. ಆಂಧ್ರಪ್ರದೇಶ ಈಗ ಮುಳುಗುವ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಕರ್ನಾಟಕದ ಪ್ರಬುದ್ಧ ಜನರು ಚಿಂತಿಸಬೇಕಾದ ಅಗತ್ಯವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಉಚಿತ ಯೋಜನೆಗಳಿಗೆ ಹಣಕಾಸನ್ನು ಎಲ್ಲಿಂದ ಒದಗಿಸುತ್ತಾರೆ ಎಂಬ ವರದಿ ಕೊಡಬೇಕು. ಲೋಕಸಭಾ ಚುನಾವಣೆಗೆ ಮೇಲೆ ಗ್ಯಾರೆಂಟಿ ಎಫೆಕ್ಟ್ ಆಗಲ್ಲ ಎಂದರು.
ಶೋಭಾ ಕರಂದ್ಲಾಜೆಗೂ ಫ್ರೀ ಸರ್ಕಾರಿ ಬಸ್ ಎಂದು ಕಾಂಗ್ರೆಸ್ ಟ್ವೀಟ್ ಮಾಡಿರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ದುರಹಂಕಾರ ತೋರಿಸಿದೆ. ಜನ ಅಹಂಕಾರಕ್ಕೆ ಮದ್ದು ಕೊಡುತ್ತಾರೆ ಎಂದು ಕಿಡಿಕಾರಿದರು.