ಉಡುಪಿ: ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಅಣ್ಣಾಮಲೈ ಅವರು ಇಂದು ಉಡುಪಿಗೆ ಬಂದಿಳಿದ ಹೆಲಿಕಾಪ್ಟರ್ ನಿಗದಿತ ಸಮಯಕ್ಕಿಂತ ಮೊದಲೇ ಬಂದಿದೆ. ಈ ಹೆಲಿಕಾಪ್ಟರ್ ನಲ್ಲಿ ಹಣದ ಗಂಟು ಬಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಮಾಜಿ ಸಚಿವ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಗಂಭೀರ ಆರೋಪ ಮಾಡಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ರವಾನೆ ಆಗಿದ್ದರೆ ಜಿಲ್ಲಾಧಿಕಾರಿಗಳು ಕೂಡಲೇ ವಶಕ್ಕೆ ಪಡೆದುಕೊಳ್ಳಬೇಕು ಎಂದರು.
ಕಳೆದ ಬಾರಿ ಸುಳ್ಳು ಪ್ರಚಾರದಿಂದ ಬಿಜೆಪಿ ಗೆಲುವು ಸಾಧಿಸಿದೆ. ಆದರೆ ಪ್ರತಿ ಬಾರಿಯೂ ಸುಳ್ಳು ನಡೆಯಲ್ಲ. ಉಡುಪಿ ಜಿಲ್ಲೆಯ ಮತದಾರರು ಪ್ರಭುದ್ಧರಾಗಿದ್ದಾರೆ. ಈ ದೇಶದ ಪ್ರಜಾಪ್ರಭುತ್ವ ಜಾತ್ಯತೀತತೆ ಉಳಿಸಲು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಅವರು ಹೇಳಿದರು.