ಉಡುಪಿ: ಅಮೆರಿಕಾದ ಹೂಸ್ಟನ್ ಮಹಾನಗರದಲ್ಲಿರುವ ಪುತ್ತಿಗೆ ಮಠದ ಶ್ರೀ ಕೃಷ್ಣ ವೃಂದಾವನದಲ್ಲಿ 12ನೇಯ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು.
ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಶ್ರೀಕೃಷ್ಣದೇವರಿಗೆ 108 ಪ್ರಸನ್ನ ಕಲಶಾಭಿಷೇಕ ಪೂಜೆಯನ್ನು ನೆರವೇರಿಸಿದರು. ಬಳಿಕ ನೆರೆದ ಭಕ್ತರಿಗೆ ಮುದ್ರಾಧಾರಣೆ ಮಾಡಿದರು. ಸಂಜೆ ಗೋಧೂಳಿ ಲಗ್ನದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣಮಹೋತ್ಸವ ನಡೆಯಿತು.