ಉಡುಪಿ: ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 2023-24 ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭ ಇಂದು ಶಾಲಾ ಆವರಣದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಪೊಲಿಪು ಪ್ರೌಢ ಶಾಲಾ ವಿಭಾಗದಲ್ಲಿ ನಿರ್ಮಿಸಿರುವ ವಿವೇಕ ಶಾಲಾ ಕೊಠಡಿಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಶಾಲೆ ವಿದ್ಯೆ ಮತ್ತು ಸಂಸ್ಕೃತಿಯನ್ನು ಕೊಟ್ಟು ನಮ್ಮನ್ನು ಈ ಜಗತ್ತಿಗೆ ಅರ್ಪಣೆ ಮಾಡುತ್ತದೆ. ಹಕ್ಕಿ ಎಷ್ಟೇ ಮೇಲಕ್ಕೆ ಏರಿದರು ಕೂಡ ಕಾಳು ತಿನ್ನಲು ಕೆಳಗಡೆ ಬರಲೇಬೇಕು. ಅದರಂತೆ ನಾವು ಎಷ್ಟೇ ದೊಡ್ಡ ವ್ಯಕ್ತಿಗಳಾದರೂ ಶಾಲೆಯನ್ನು ಮರೆಯುವಂತಿಲ್ಲ ಎಂದರು.
ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಶ್ರೀನಿವಾಸ್ ಗ್ರೂಪ್ ಆಫ್ ಕಾಲೇಜು ಇದರ ಮೂಳೆ ಹಾಗೂ ಕೀಲು ವಿಭಾಗದ ಮುಖ್ಯಸ್ಥ ಡಾ. ಶಶಿರಾಜ್ ಕೆ. ಶೆಟ್ಟಿ, ಕಾಪು ಬಿಲ್ಲವ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ, ಪುರಸಭಾ ಸದಸ್ಯರಾದ ರಾಧಿಕಾ ಎಸ್ ಸುವರ್ಣ, ಕಿರಣ್ ಆಳ್ವ, ಪೊಲಿಪು ಶತ ವಜ್ರ ಸ್ವರ್ಣ ಸಂಭ್ರಮ ಸಮಿತಿ ಅಧ್ಯಕ್ಷ ಸರ್ವೊತ್ತಮ್ ಕುಂದರ್, ಪೊಲಿಪು ಮೊಗವೀರ ಮಹಾಸಭಾ ಅಧ್ಯಕ್ಷ ಶ್ರೀಧರ್ ಕಾಂಚನ್, ನೀಲಾಧರ ಎಸ್ ಕುಂದರ್, ಜಯಕರ ಕುಂದರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರವೀಣ್ ಡಿ ಕುಂದರ್, ಪೌಢ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸತೀಶ್ ಶೆಟ್ಟಿ, ಪ್ರಾಥಮಿಕ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಶೋಭಾ ಶೆಟ್ಟಿ, ಪ್ರಾಂಶುಪಾಲ ಶಿವಲಿಂಗಪ್ಪ, ಪ್ರೌಢ ವಿಭಾಗದ ಮುಖ್ಯೋಪಾಧ್ಯಾಯಿನಿ ರಮಣಿ ವೈ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಉಪಸ್ಥಿತರಿದ್ದರು.