ಕುಂದಾಪುರ: ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ (ನ.20) ಹೆರಿಗೆ ವೇಳೆ ಮಗು ಮೃತಪಟ್ಟದ್ದು, ವೈದ್ಯರ ನಿರ್ಲಕ್ಷ್ಯ ಆರೋಪಿಸಿ ಸಾರ್ವಜನಿಕರು ಆಸ್ಪತ್ರೆ ಎದುರು ಅಹೋ ರಾತ್ರಿ ಪ್ರತಿಭಟನೆ ನಡೆಸಿದರು.
ನ.17ರಂದು ರಾತ್ರಿ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಎಂಬವರ ಪತ್ನಿ ಹೆರಿಗೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಬೆಳಗ್ಗೆ ಹೆರಿಗೆ ಮಾಡಿಸಿದ ವೈದ್ಯರು ಮಗು ಮೃತಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ವೈದ್ಯರ ನಿರ್ಲಕ್ಷ್ಯ ದಿಂದಲೇ ಮಗು ಮೃತಪಟ್ಟಿದೆ ಎಂದು ಮನೆಯವರು ಹಾಗೂ ಗ್ರಾಮಸ್ಥರು ಆರೋಪಿಸಿ, ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಸ್ಥಳಕ್ಕೆ ಬಂದ ಡಿಎಚ್ ಓ, ವೈದ್ಯಾಧಿಕಾರಿ ರಾಬರ್ಟ್ ರೆಬೆಲ್ಲೋ ಅವರು ಪ್ರತಿಭಟನಾಕಾರರಲ್ಲಿ ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದರು. ಇನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕುಟುಂಬಕ್ಕೆ ಸಾಂತ್ವಾನ ಹೇಳಿದರು.