ಉಡುಪಿ: ಜಿಲ್ಲೆಯ ಕೊಲ್ಲೂರಿನ ಬೆಳ್ಳಾಲ ಸಮೀಪ ನಾಲ್ಕು ದಿನಗಳ ಹಿಂದೆ ಬಂದೂಕಿನಿಂದ ಗುಂಡು ಹಾರಿಸಿ ನಡೆದ ಗೋವುಗಳ ಸರಣಿ ಹತ್ಯೆಯನ್ನು ಖಂಡಿಸಿ ಇಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬಳಿಕ ಆರೋಪಿ ನರಸಿಂಹ ಕುಲಾಲ್ ನನ್ನು ತಕ್ಷಣ ಬಂಧಿಸಲು ಕೊಲ್ಲೂರು ಪೊಲೀಸ್ ಸ್ಟೇಷನ್ ಗೆ ಹೋಗಿ ಒತ್ತಾಯಿಸಿ, ಠಾಣಾಧಿಕಾರಿಯವರೆಗೆ ಮನವಿಯನ್ನು ಸಲ್ಲಿಸಿದ್ದಾರೆ. ನಂತರ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡದ ನೇತೃತ್ವ ಗೋವುಗಳನ್ನು ಕಳೆದುಕೊಂಡ ಸಂತ್ರಸ್ಥ ಮನೆಗಳಿಗೆ ತೆರಳಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.