ಕುಂದಾಪುರ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರು ಚೆಕ್ ಪೋಸ್ಟ್ ನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿರುವ ಪ್ರತಿಯೊಂದು ವಾಹನಗಳನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.
ಬಿಸಿಲಿನ ತಾಪದಲ್ಲಿಯೂ ಚುನಾವಣಾ ಅಧಿಕಾರಿಗಳು ನಿಷ್ಠೆಯಿಂದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದ್ದು,ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ರಾಜಕಾರಣಿಗಳು ಮತದಾರರಿಗೆ ಹಣ, ಸೀರೆ, ಉಡುಗೊರೆಗಳನ್ನು ನೀಡಿ ಮತದಾನ ಮಾಡುವಂತೆ ಆಮಿಷ ಒಡ್ಡುವ ಹಿನ್ನೆಲೆಯಲ್ಲಿ ನ್ಯಾಯ ಸಮ್ಮತ ಚುನಾವಣೆ ನಡೆಸಲು ಪಣತೊಟ್ಟಿರುವ ಚುನಾವಣಾ ಅಧಿಕಾರಿಗಳು ಅಲಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಿ ಕಾವಲು ಕಾಯುತ್ತಿದ್ದಾರೆ.