ಉಡುಪಿ: ರಾಷ್ಟ್ರೀಯ ಹೆದ್ದಾರಿ 169ರ ಇಂದ್ರಾಳಿ ರೈಲ್ವೆ ಸೇತುವೆ ಬಳಿ ತಾತ್ಕಾಲಿಕ ರಸ್ತೆ ವಿಭಾಜಕವಾಗಿ ಬ್ಯಾರಿಕೇಡ್ ಅಳವಡಿಸಲಾಗಿದೆ.
ಇದೀಗ ಬ್ಯಾರಿಕೇಟ್ ನ ತಗಡು ಕಿತ್ತು ಹೊರಕ್ಕೆ ಬಂದು ನೇತಾಡುತ್ತಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಇನ್ನೊಂದೆಡೆ ಇಲ್ಲಿ ದಾರಿದೀಪದ ವ್ಯವಸ್ಥೆ ಕೂಡ ಸರಿಯಾಗಿಲ್ಲ.
ಹೊಸ ಸೇತುವೆ ನಿರ್ಮಾಣ ಆಗುವ ಲಕ್ಷಣ ಸಾಧ್ಯಕ್ಕೆ ಕಾಣುತ್ತಿಲ್ಲ. ಪ್ರತಿದಿನ ವಾಹನ ದಟ್ಟಣೆ ಹೆಚ್ಚುತ್ತಿದ್ದು, ವಾಹನ ಸವಾರರು ಆತಂಕದಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ.
ಹೀಗಾಗಿ ಜಿಲ್ಲಾಡಳಿತವು ತಕ್ಷಣ ಸಮಸ್ಯೆಯನ್ನು ಪರಿಶೀಲಿಸಿ ಕ್ರಮ ಜರುಗಿಸಬೇಕೆಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.