ಕಾರ್ಕಳ: ತಾಲೂಕಿನ ಬಿಜೆಪಿ ಪದಾಧಿಕಾರಿಯೊಬ್ಬರು 4 ಕೋಟಿ ರೂ ವೆಚ್ಚದಲ್ಲಿ ಬೇನಾಮಿ ಆಸ್ತಿ ಖರೀದಿ ಮಾಡಿದ್ದಾರೆ. ಇದರಲ್ಲಿ ಸಚಿವರೊಬ್ಬರ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಶ್ರೀರಾಮ ಸೇನೆಯ ಸ್ಥಾಪಕಾದ್ಯಕ್ಷ ಪ್ರಮೋದ್ ಮುತಾಲಿಕ್ ಡಿಸಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಅದಾಯ ಇಲ್ಲದ ದಂಪತಿಗಳಿಬ್ಬರು ರಾಜಕೀಯ ಪ್ರಭಾವ ಬಳಸಿ ಸುಮಾರು ನಾಲ್ಕು ಕೋಟಿ ರೂ ವೆಚ್ಚದ ಜಮೀನು ಖರೀದಿಸಿದ್ದು, ರೈತರ ಮೇಲೆ ಒತ್ತಡ ತಂದು ಕಡಿಮೆ ಬೆಲೆಯಲ್ಲಿ ಜಮೀನು ಖರೀದಿ ಮಾಡಲಾಗಿದೆ. ಇದೀಗ ಈ ಜಾಗ ಕೈಗಾರಿಕಾ ವಲಯವನ್ನಾಗಿ ಘೋಷಣೆ ಮಾಡಲಾಗಿದೆ.
ಆದ್ದರಿಂದ ಈ ಜಾಗ ಖರೀದಿ ಹಾಗೂ ಕೈಗಾರಿಕಾ ವಲಯವನ್ನಾಗಿ ಮಾಡಿರುವ ಹಿಂದೆ ಬಹು ದೊಡ್ಡ ರಾಜಕೀಯ ಸಂಚು ಅಡಗಿದ್ದು, ಈ ಬಗ್ಗೆ ಸಮಗ್ರವಾದ ತನಿಖೆ ನಡೆಸಬೇಕೆಂದು ನಾವು ಜಿಲ್ಲಾಧಿಕಾರಿಗಳು, ಲೋಕಾಯುಕ್ತರಿಗೆ ದೂರು ನೀಡಿದ್ದೇವೆ ಎಂದರು.