News Karnataka Kannada
Monday, May 06 2024
ಉಡುಪಿ

ಇಂದ್ರಾಳಿ: ಕೋಟ್ಯಾಂತರ ರೂ. ವ್ಯಯ ಮಾಡಿ ನಿರ್ಮಿಸಿದ ರಸ್ತೆಯಲ್ಲಿ ಬಿರುಕು

 Bidar: Ban on use of children in election campaigns
Photo Credit : News Kannada

ಉಡುಪಿ: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯಿಂದ ರೈಲು ನಿಲ್ದಾಣ ಸಂಪರ್ಕಿಸುವ ಜಾರ್ಜ್ ಫೆರ್ನಾಂಡಿಸ್ ರಸ್ತೆಯನ್ನು ಕೆಲವು ಸಮಯಗಳ ಹಿಂದೆ ದುರಸ್ಥಿ ಪಡಿಸಲಾಗಿತ್ತು. ಇದೀಗ ಕಳಪೆ ಮಟ್ಟದ ಕಾಮಗಾರಿಯಿಂದ ಕಾಂಕ್ರೀಟ್ ರಸ್ತೆ ಬಿರುಕು ಬಿಟ್ಟಿದ್ದು. ಸಾರ್ವಜನಿಕರ ಹಣ ಪೋಲಾಗಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಂಡ ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಅಯೋಗ್ಯವಾಗಿದ್ದ ಜಾರ್ಜ್ ಫೆರ್ನಾಂಡಿಸ್ ರಸ್ತೆಯನ್ನು ದುರಸ್ತಿ ಪಡಿಸುವಂತೆ ವಿನೂತನ ಪ್ರತಿಭಟನೆಯ ಮೂಲಕ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಅಧಿಕಾರಿಗಳ ಗಮನ ಸೆಳೆದಿದ್ದರು. ಆ ಬಳಿಕ ರೈಲ್ವೆ ಆರೋಗ್ಯ ಕೇಂದ್ರದಿಂದ, ರೈಲು ನಿಲ್ದಾಣದವರೆಗೆ ಕಾಂಕ್ರೀಟಿಕರಣಗೊಳಿಸಲು ಮಂಜೂರಾತಿ ದೊರೆತಿತ್ತು. ಇದೀಗ ಕಾಮಗಾರಿ ನಡೆದು ಕೆಲವು ದಿನಗಳು ಕಳೆದಿದೆ. ಆದರೆ ರಸ್ತೆ ಅಲ್ಲಲ್ಲಿ ಬಿರುಕು ಬಿಟ್ಟಿದೆ. ಸಾವಿರಾರು ವಾಹನಗಳು ಇಲ್ಲಿ ಸಂಚರಿಸುತ್ತಿದ್ದು, ಇದೀಗ ವಾಹನಗಳು ಸಂಚರಿಸಲು ಭಯ ಪಡಬೇಕಾದ ಪರಿಸ್ಥಿತಿ ಎದುರಾಗಿದೆ.

ಕೋಟ್ಯಾಂತರ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ರಸ್ತೆ ಕೆಲವೇ ದಿನಗಳಲ್ಲಿ ಹಾಳಾಗಿರುವುದಕ್ಕೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲಾಖೆಯವರು ಗುತ್ತಿಗೆದಾರರಿಂದಲೇ ಸಂಪೂರ್ಣ ರಸ್ತೆ ನಿರ್ಮಾಣದ ಹಣವನ್ನು ವಸೂಲಿ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿನೀಡಿ ಕಾಮಗಾರಿಯ ಪರಿಶೀಲನೆ ನಡೆಸಬೇಕು, ಸತ್ಯಾಸತ್ಯತೆ ಅರಿತು ಸೂಕ್ತ ಕ್ರಮ ಜರುಗಿಸ ಬೇಕೆಂದು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು