News Karnataka Kannada
Monday, May 20 2024
ಉಡುಪಿ

ಅಡಿಕೆ ಬೆಳೆಗಾರ ಹಿತ ಕಾಪಾಡಲು ಬಿಜೆಪಿ ಸರಕಾರ ವಿಶೇಷ ನೆರವು ನೀಡಿದೆ -ಅಮಿತ್ ಶಾ

BJP government has given special assistance to protect the interest of arecanut growers: Amit Shah
Photo Credit : News Kannada

ಕುಂದಾಪುರ: ಅಡಿಕೆ ಬೆಲೆ ಇಳಿಕೆಯಾದಾಗ ಬಿಜೆಪಿ ಸರ್ಕಾರ ಅಡಿಕೆ ಬೆಳೆಗಾರ ಹಿತ ಕಾಪಾಡಲು ವಿಶೇಷವಾದ ನೆರವನ್ನು ನೀಡಿದೆ. ನವ ಬಂದರುಗಳನ್ನು ನಿರ್ಮಿಸುವ ಮೂಲಕ ಮೀನುಗಾರರಿಗೆ ಅನುಕೂಲಕರ ವಾತಾವರಣ ನಿರ್ಮಿಸಿ ಕೊಡಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಶನಿವಾರ ನಡೆದ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಿದ ಅವರು ಬೈಂದೂರು ಕ್ಷೇತ್ರದ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರವಾಗಿ ಮತಯಾಚನೆ ಮಾಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು‌.

ಎನ್ಐಎ ಬಳಸಿಕೊಂಡು ದೇಶದಲ್ಲಿ ಅಡಗಿ ಕುಳಿತಿರುವ ದೇಶ ದ್ರೋಹಿಗಳನ್ನು ಮಟ್ಟ ಹಾಕಲು ವಿಶೇಷವಾದ ಕ್ರಮ ವಹಿಸಲಾಗಿದೆ.ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಸಾಮಾನ್ಯ ಕಾರ್ಯಕರ್ತರ ಸಾಮಾನ್ಯ ನಾಯಕರಾದ ಗುರುರಾಜ್ ಗಂಟಿಹೊಳೆ ಅವರನ್ನು 50,000ಕ್ಕೂ ಅಧಿಕ ಮತಗಳಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಮಾತನಾಡಿ,ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ,ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ,ಕ್ಷೇತ್ರದ ಉಸ್ತುವಾರಿ ಬ್ರಿಜೇಶ್ ಚೌಟ, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು