News Karnataka Kannada
Saturday, May 18 2024
ಉಡುಪಿ

ಆಡಳಿತಾಧಿಕಾರಿಗಳ ದುರಾಡಳಿತ ವಿರೋಧಿಸಿ ಬಿಜೆಪಿಯಿಂದ ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ

ಉಡುಪಿ ನಗರಸಭೆಯ ಆಡಳಿತಾಧಿಕಾರಿಗಳ ದುರಾಡಳಿತ ಕಾರ್ಯವೈಖರಿಯನ್ನು ವಿರೋಧಿಸಿ ಉಡುಪಿ ನಗರ ಬಿಜೆಪಿ ನೇತೃತ್ವದಲ್ಲಿ ಇಂದು ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
Photo Credit : News Kannada

ಉಡುಪಿ: ಉಡುಪಿ ನಗರಸಭೆಯ ಆಡಳಿತಾಧಿಕಾರಿಗಳ ದುರಾಡಳಿತ ಕಾರ್ಯವೈಖರಿಯನ್ನು ವಿರೋಧಿಸಿ ಉಡುಪಿ ನಗರ ಬಿಜೆಪಿ ನೇತೃತ್ವದಲ್ಲಿ ಇಂದು ಉಡುಪಿ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಬಿಜೆಪಿ ಕಾರ್ಯಕರ್ತರು ಪೌರಾಯುಕ್ತರ ವಿರುದ್ಧ ದಿಕ್ಕಾರ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಯಶ್‌ಪಾಲ್ ಸುವರ್ಣ, ಕಳೆದ ಏಳು ತಿಂಗಳುಗಳಿಂದ ನಗರಸಭೆಯಲ್ಲಿ ಭ್ರಷ್ಟಾಚಾರ, ಕಳಪೆ ಕಾಮಗಾರಿ, ದುರಾಡಳಿತ ಹೆಚ್ಚಾಗಿದ್ದು, ಇದರ ವಿರುದ್ಧ ಜನ ರೋಸಿ ಹೋಗಿದ್ದಾರೆ. ಚುನಾಯಿತ ಜನಪ್ರತಿನಿಧಿಗಳ ಆಡಳಿತ ಇಲ್ಲದೆ ವಿವಿಧ ಸೇವೆ ಸವಲತ್ತುಗಳನ್ನು ಪಡೆಯುವಲ್ಲಿ ಜನಸಾಮಾನ್ಯರು ಬವಣೆ ಪಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಿಂಗಳಿಗೊಮ್ಮೆ ನಗರಸಭಾ ಸದಸ್ಯರ ಸಭೆ ನಡೆಸಬೇಕು. ವಾರಕ್ಕೆ ಒಂದು ದಿನ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿ ಪರಿಹಾರ ಒದಗಿಸಲು ಕ್ರಮ ತೆಗೆದುಕೊಳ್ಳಬೇಕು. ಕಳಪೆ ಕಾಮಗಾರಿ ಬಹ್ಗೆ ಸೂಕ್ತ ತನಿಖೆ ನಡೆಸಬೇಕು. ಕುಡಿಯುವ ನೀರಿನ ಅವೈಜ್ಞಾನಿಕ ದರ ಹೆಚ್ಚಳವನ್ನು ಹಿಂಪಡೆಯಬೇಕು. ಅಕ್ರಮ ಕಟ್ಟಡಗಳಿಗೆ ನೀಡಿರುವ ಪರವಾನಿಗೆಯನ್ನು ತಕ್ಷಣ ರದ್ದುಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಬಳಿಕ ನಗರಸಭೆ ಅಧಿಕಾರಿಗಳ ಮೂಲಕ ನಗರಸಭೆ ಆಡಳಿತಾಧಿಕಾರಿಯಾಗಿ ರುವ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭಾ ಸದಸ್ಯರಾದ ವಿಜಯ ಕೊಡವೂರು, ಯೋಗೀಶ್ ಸಾಲ್ಯಾನ್, ಬಾಲಕೃಷ್ಣ ಶೆಟ್ಟಿ, ಕೃಷ್ಣರಾವ್ ಕೊಡಂಚ ಮೊದಲಾದವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು