ಉಡುಪಿ: ಬೂತ್ ಸಮಿತಿಯ ಸಮಾವೇಶದ ಹಿನ್ನೆಲೆಯಲ್ಲಿ ಉಡುಪಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.
ಶ್ರೀಕೃಷ್ಣನ ದರ್ಶನ ಮಾಡಿದ ನಡ್ಡಾ ಅವರು, ಶ್ರೀಕೃಷ್ಣ -ಮುಖ್ಯಪ್ರಾಣ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಪರ್ಯಾಯ ಕೃಷ್ಣಾಪುರ ಸ್ವಾಮೀಜಿಯನ್ನು ಭೇಟಿ ಮಾಡಿ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಸುನೀಲ್ ಕುಮಾರ್, ಎಸ್.ಅಂಗಾರ, ಶಾಸಕ ರಘಪತಿ ಭಟ್ ಸಾಥ್ ನೀಡಿದರು.