Categories: ಉಡುಪಿ

ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲ ಸಭೆ: ಮೋದಿ ಆಡಳಿತದ 9 ವರ್ಷಗಳ ‘ಮಹಾ ಸಂಪರ್ಕ ಅಭಿಯಾನ’

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳನ್ನು ಜನಮಾನಸದಲ್ಲಿ ಪ್ರಚಲಿತಗೊಳಿಸುವ ಸಲುವಾಗಿ ಪಕ್ಷ ಹಮ್ಮಿಕೊಂಡಿರುವ ಸರಣಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಮತ್ತು ಮಹಾಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆ ಕಾರ್ಯಕ್ರಮವು ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ ಮಂಡಲ ಕಛೇರಿಯಲ್ಲಿ ನಡೆಯಿತು.

ಅಭಿಯಾನದ ಸರಣಿ ಕಾರ್ಯಕ್ರಮಗಳ ಗ್ರಾಮಾಂತರ ಮಂಡಲ ಉಸ್ತುವಾರಿ ರೇಶ್ಮಾ ಉದಯ ಶೆಟ್ಟಿ ಮಾತನಾಡಿ, ಪಕ್ಷದ ಸೂಚನೆಯಂತೆ ಮಂಡಲ ಮಟ್ಟದಲ್ಲಿ ಹಿರಿಯ ಬಿಜೆಪಿಗರ ಸಮಾವೇಶ, ವ್ಯಾಪಾರಸ್ಥರ ಸಮಾವೇಶ, ಮಂಡಲ ಕಾರ್ಯಕಾರಿಣಿ ಸಭೆಯ ಸಹಿತ ಕೇಂದ್ರ ಸರಕಾರದ 9 ವರ್ಷಗಳ ಸಾಧನೆ ಪ್ರಚುರಪಡಿಸುವ ಕರಪತ್ರ ವಿತರಣೆ, ಮನೆ ಮನೆ ಭೇಟಿ ಹಾಗೂ ಮಂಡಲ ವ್ಯಾಪ್ತಿಯ 100 ಮಂದಿ ಪ್ರಮುಖರು ಮತ್ತು ವೃತ್ತಿಪರರ ತಂಡ ರಚನೆ ಮಾಡಲಾಗುವುದು.

ಪ್ರತೀ ಬೂತ್ ವ್ಯಾಪ್ತಿಯಲ್ಲಿ 100 ಮಂದಿ ಸಕ್ರಿಯ ಕಾರ್ಯಕರ್ತರ ತಂಡ ರಚನೆ, ಮಂಡಲ ಪದಾಧಿಕಾರಿಗಳ ಸೌಹಾರ್ದ ಕೂಟ ಆಯೋಜನೆ ಮತ್ತು ಮಂಡಲದ ಸೋಷಿಯಲ್ ಮೀಡಿಯಾ ತಂಡವನ್ನು ಸಕ್ರಿಯಗೊಳಿಸುವುದು ಇವೇ ಮುಂತಾದ ಪ್ರಮುಖ ಕಾರ್ಯ ಯೋಜನೆಗಳನ್ನು ಜುಲೈ ತಿಂಗಳ ಅಂತ್ಯದೊಳಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಮನೆ ಮನೆ ಸಂಪರ್ಕದ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಜನಪರ ಆಡಳಿತ ಹಾಗೂ ರಾಜ್ಯ ಸರಕಾರದ ಆಡಳಿತ ವೈಫಲ್ಯ ಮತ್ತು ಜನವಿರೋಧಿ ನೀತಿಯನ್ನು ಜನತೆಗೆ ಮನದಟ್ಟು ಮಾಡುವ ಮೂಲಕ ಮುಂದಿನ ತಾ.ಪಂ., ಜಿ.ಪಂ. ಮತ್ತು ಲೋಕಸಭಾ ಚುನಾವಣೆಯಲ್ಲಿ ಮಗದೊಮ್ಮೆ ಬಿಜೆಪಿಯ ದೊಡ್ಡ ಅಂತರದ ಗೆಲುವಿಗೆ ಸಂಘಟಿತರಾಗಿ ಶ್ರಮಿಸುವಂತೆ ಮನವಿ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳ ವಿವರಗಳನ್ನೊಳಗೊಂಡಿರುವ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಗಣೇಶ್ ಕುಲಾಲ್, ಕಾರ್ಯದರ್ಶಿ ಸುರೇಶ್ ಪೂಜಾರಿ, ಬ್ರಹ್ಮಾವರ ಮಹಾ ಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ದೇವಾನಂದ್, ಪ್ರಮುಖರಾದ ರಾಜೇಶ್ ಶೆಟ್ಟಿ ಬಿರ್ತಿ, ರಾಜು ಪೂಜಾರಿ ಉಪ್ಪೂರು ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago