ಉಡುಪಿ: ಬಿಜೆಪಿ 125ಕ್ಕಿಂತಲೂ ಅಧಿಕ ಸ್ಥಾನಗಳಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಗಳು ಏನೇ ಹೇಳಲಿ, ಬಿಜೆಪಿ ನಿಶ್ಚಳವಾಗಿ ಬಹುಮತ ಲಭಿಸಲಿದೆ.
ರಾಜ್ಯದ 58 ಸಾವಿರ ಬೂತಗಳ ಪೈಕಿ 31 ಸಾವಿರ ಬೂತ್ ಗಳಲ್ಲಿ ಹೆಚ್ಚಿನ ಮತ ಪಡೆದಿದ್ದೇವೆ. 2018ರ ಚುನಾವಣೆಯಲ್ಲಿ 24 ಸಾವಿರ ಮತಗಟ್ಟೆಗಳಲ್ಲಿ ಹೆಚ್ಚಿನ ಮತ ಪಡೆದಿದ್ದೇವು. ಆಗ ಬಿಜೆಪಿ 104 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈಗ 31 ಬೂತ್ ಗಳಲ್ಲಿ ಹೆಚ್ಚು ಮತ ಪಡೆದಿರುವುದರಿಂದ ನಿಶ್ಚಿತವಾಗಿ 120ರಿಂದ 125 ಸ್ಥಾನಗಳನ್ನು ಗಳಿಸುತ್ತೇವೆ ಎಂದರು.
ಸಮೀಕ್ಷೆಕ್ಕಿಂತ ಹೆಚ್ಚಾಗಿ ಮತಗಟ್ಟೆಯ ಕಾರ್ಯಕರ್ತರು,ಬೂತ್ ಎಜೆಂಟ್ ಗಳು ಕೊಟ್ಟಿರುವ ನಿಖರ ಮಾಹಿತಿಯ ಆಧಾರದಲ್ಲಿ ಬಿಜೆಪಿ 125ಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದು ಅಧಿಕಾರ ನಡೆಸಲಿದೆ ಎಂದು ಭವಿಷ್ಯ ನುಡಿದರು.
ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ.
ತಾಲೂಕಿನ ಕರಜಗಿ ಗ್ರಾಮದಲ್ಲಿ ಇಂದು ಸಾಯಂಕಾಲ 6 ಗಂಟೆಗೆ ನಮೋ ಬ್ರಿಗೇಡ್ ವತಿಯಿಂದ ದೇಶಕ್ಕಾಗಿ ಮೋದಿ ಮೋದಿಗಾಗಿ ನಾವು ಬಹಿರಂಗ…
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್ಗೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಮನೆಗೆ ಬಂದಿದ್ದ ಪಾರ್ಸೆಲ್ ಸ್ಫೋಟಗೊಂಡು ತಂದೆ ಹಾಗೂ ಮಗಳು ಸಾವನ್ನಪ್ಪಿದ್ದ ಘಟನೆ ಗುಜರಾತ್ನ ವಡಾಲಿಯಲ್ಲಿ ಗುರುವಾರ ನಡೆದಿದೆ.
ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಟಾರ್ಚ್ ಲೈಟ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆ ಮಾಡುವಾಗ ಗರ್ಭಿಣಿ ಹಾಗೂ ಆಕೆಯ ಮಗು ಹೊಟ್ಟೆಯಲ್ಲಿಯೇ ಮೃತಪಟ್ಟಿರುವ ಅಘಾತಕಾರಿ…
ದಕ್ಷಿಣ ಕನ್ನಡದಲ್ಲಿ ಉರಿ ಬಿಸಿಲಿನ ತಾಪಮಾನಕ್ಕೆ ಜನ ಹೈರಾಣಾಗಿದ್ದಾರೆ. ಕಳೆದ 20 ವರ್ಷಗಳಲ್ಲಿ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್…