Categories: ಉಡುಪಿ

ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಉಡುಪಿ: ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಕುಂದಾಪುರ, ಉಡುಪಿ, ಕಾರ್ಕಳ, ಕಾಪು ಹಾಗೂ ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ‌ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು 96122 ಮತಗಳನ್ನು ಪಡೆದು, 32,318 ಭಾರೀ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ 63804 ಮತಗಳನ್ನು ಪಡೆದಿದ್ದಾರೆ.

ಕಾರ್ಕಳ ಕ್ಷೇತ್ರದಲ್ಲಿ ಬಿಜೆಪಿಯ ಸುನೀಲ್ ಕುಮಾರ್ 76019 ಮತಗಳನ್ನು ಪಡೆದು 4404 ಮತಗಳ ಅಂತರದಿಂದ ಗೆಲುವು ಸಾಧಿಸಿದ್ಧಾರೆ. ಕಾಂಗ್ರೆಸ್ ನ ಉದಯ ಶೆಟ್ಟಿ 71615 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ – 4432 ಮತಗಳನ್ನು ಗಳಿಸಿದ್ದಾರೆ.

ಕುಂದಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ 101102 ಮತಗಳನ್ನು ಪಡೆದು, 40930 ಮತಗಳ ಭಾರೀ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಕಾಂಗ್ರೆಸ್ ನ ದಿನೇಶ್ ಹೆಗ್ಡೆ ಮೊಳಹಳ್ಳಿ 60172 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸುರೇಶ್ ಶೆಟ್ಟಿ ಗುರ್ಮೆ 79793 ಮತಗಳನ್ನು ಪಡೆದು, 12709 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ವಿನಯಕುಮಾರ್ ಸೊರಕೆ 67084 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗುರುರಾಜ್ ಗಂಟಿಹೊಳಿ 97447 ಮತಗಳನ್ನು ಪಡೆದು, 15929 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ನ ಗೋಪಾಲ ಪೂಜಾರಿ 81518 ಮತಗಳನ್ನು ಗಳಿಸಿ ಸೋಲು ಅನುಭವಿಸಿದ್ದಾರೆ.

Ashika S

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

4 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

4 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

5 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

5 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

6 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

6 hours ago