News Karnataka Kannada
Monday, April 29 2024
ಉಡುಪಿ

ಬಿಜೆಪಿಯಲ್ಲಿ ಕುಟುಂಬ, ಜಾತಿಯ ಆಧಾರದಲ್ಲಿ ಮುಖ್ಯಮಂತ್ರಿ ಆಗಲ್ಲ:  ಸಚಿವ ಸುನಿಲ್ ಕುಮಾರ್ 

Bjp won't become CM on the basis of family, caste: Sunil Kumar 
Photo Credit : News Kannada

ಉಡುಪಿ: ಇವತ್ತು ಕುಟುಂಬದ ಆಧಾರದಲ್ಲಿ ಮುಖ್ಯಮಂತ್ರಿ ಆಗುವಂತಹ ಅರ್ಹತೆ ಹೊಂದಿದ್ದರೆ, ಅದು ಜೆಡಿಎಸ್ ನಲ್ಲಿ ಮಾತ್ರ. ಬಿಜೆಪಿಯಲ್ಲಿ ಕುಟುಂಬದ ಆಧಾರಿತವಾಗಿಯೂ ಮುಖ್ಯಮಂತ್ರಿ ಆಗುವುದಿಲ್ಲ, ಜಾತಿಯ ಆಧಾರಿತವಾಗಿಯೂ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.

ಕುಮಾರಸ್ವಾಮಿಯ ಬ್ರಾಹ್ಮಣ ಸಿಎಂ ಹೇಳಿಕೆಗೆ ಉಡುಪಿಯಲ್ಲಿಂದು ಅವರು ಪ್ರತಿಕ್ರಿಯೆ ನೀಡಿದರು.

ನಮ್ಮ ಪಕ್ಷದಲ್ಲಿ ನಿಷ್ಠೆ ಇರಬೇಕು, ಅನುಭವ ಇರಬೇಕು.ಇದರ ಆಧಾರದಲ್ಲಿ ಮುಖ್ಯಮಂತ್ರಿ ಆಗುತ್ತಾರೆ ವಿನಃ ಯಾರದ್ದೊ ಮಗ ಎನ್ನುವ ಕಾರಣಕ್ಕೆ, ಯಾವುದೋ ಜಾತಿಯ ಎನ್ನುವ ಕಾರಣಕ್ಕೆ ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಲ್ಲ ಎಂದು ತಿರುಗೇಟು ನೀಡಿದರು.

ಬ್ರಾಹ್ಮಣ ಹೆಸರಿನಲ್ಲಿ, ಜಾತಿಯ ಹೆಸರಿನಲ್ಲಿ ಕೀಳಾಗಿ ಮಾತನಾಡುವುದು ಓರ್ವ ಮುಖ್ಯಮಂತ್ರಿ ಆಗಿದ್ದವರಿಗೆ ಶೋಭೆ ತರುವುದಿಲ್ಲ. ಯಾರಿಗೆ ಅರ್ಹತೆ ಇದೆ ಅಂಥವರು ಯಾರು ಬೇಕಾದ್ರೂ ಮುಖ್ಯಮಂತ್ರಿ ಅಗಬಹುದು. ಜಾತಿಯ ಆಧಾರದಲ್ಲಿ ಯಾಕೆ ಮುಖ್ಯಮಂತ್ರಿ ಮಾಡಬೇಕು ಎಂದು ಪ್ರಶ್ನಿಸಿದರು.

ಜೆಡಿಎಸ್ ಮತ್ತು ಕಾಂಗ್ರೆಸ್ ರಾಜ್ಯದ ಅಭಿವೃದ್ಧಿಯನ್ನು ಕಣ್ಣು ಮುಂದೆ ಇಟ್ಟುಕೊಂಡು ಯಾವುದೇ ಚುನಾವಣೆಯನ್ನು ಮಾಡಿಲ್ಲ. ಜಾತಿಯ ಆಧಾರದಲ್ಲಿ ಸಮಾಜವನ್ನು ವಿಭಜಿಸುವ ಕೆಲಸವನ್ನು ಹಿಂದಿನಿಂದಲೂ ಮಾಡಿಕೊಂಡು ಬಂದಿವೆ ಎಂದು ಕಿಡಿಕಾರಿದರು.

ಕುಮಾರಸ್ವಾಮಿ ಕರ್ನಾಟಕದಲ್ಲಿ ಬಿಜೆಪಿ ಸರಕಾರವೇ ಬರುತ್ತದೆಂದು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ‌. ಬಿಜೆಪಿ ಸರಕಾರ ಬಂದ ನಂತರ ನಮ್ಮ ನಾಯಕ ಯಾರಾಗಬೇಕೆಂದು ನಮ್ಮ ಶಾಸಕಾಂಗ ಪಕ್ಷ ಸಭೆ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ನಿರ್ಧಾರ ಮಾಡುತ್ತದೆ‌ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು