ಉಡುಪಿ

ಕಾಂಗ್ರೆಸ್ ನ ಅಭಿವೃದ್ಧಿಯ ಅಲೆಯಲ್ಲಿ ಬಿಜೆಪಿಯ ಹಿಂಸೆಯ ರಾಜಕಾರಣ ಕೊಚ್ಚಿ ಹೋಗಲಿದೆ

ಕುಂದಾಪುರ: ರಾಜ್ಯದ 2013ರ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು ಮತ್ತು ಬಿಜೆಪಿಯ 40% ಕಮಿಷನ್ ಹಾಗೂ ಹಿಂಸೆಯ ರಾಜಕಾರಣದ ನಡುವೆ ನಡೆಯಲಿದೆ ಆದರೆ ಕಾಂಗ್ರೆಸ್ ಅಲೆಯಲ್ಲಿ ಬಿಜೆಪಿಯ ಜನವಿರೋಧಿ ರಾಜಕಾರಣ ಕೊಚ್ಚಿ ಹೋಗಲಿದೆ ಎಂದು ಕೆಪಿಸಿಸಿ ಸೋಶಿಯಲ್ ಮೀಡಿಯಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಆಧಾರರಹಿತ,ಬಾಲಿಷವಾದ ವದಂತಿಗಳನ್ನು ಸದಾ ಹರಡಿಕೊಂಡು ದೇಶದ ಯುವ ಜನತೆಯ ಹಾದಿ ತಪ್ಪಿಸಿ ಅನೈತಿಕ ರಾಜಕಾರಣ ಮಾಡುತ್ತಿರುವ ಬಿಜೆಪಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡದೆ ಲವ್ ಜಿಹಾದ್ ಮೇಲೆ ನಡೆಯಲಿದೆ ಎಂದು ಬಾಲಿಶವಾದ ಹೇಳಿಕೆಯನ್ನು ನೀಡಿ ಮತದಾರರನ್ನು ಮೂರ್ಖರನ್ನಾಗಿಸುವ ಪ್ರಯತ್ನ ನಡೆಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ.

ಅದಕ್ಕೆ ಉದಾಹರಣೆ ಎಂಬಂತೆ ಈಗಾಗಲೇ ಹಿಜಾಬ್,ಹಲಾಲ್, ಅಝಾನ್, ಉರಿಗೌಡ- ನಂಜೇಗೌಡ ಮುಂತಾದ ಹೆಸರಲ್ಲಿ ಮತದಾರರ ದಿಕ್ಕು ತಪ್ಪಿಸಲು ಪ್ರಯತ್ನಿಸಿ ಇದೀಗ ಜನರಿಂದ ಛೀಮಾರಿ ಹಾಕಿಸಿಕೊಂಡಿದೆ ಎಂದು ವಿಶ್ಲೇಷಿಸಿದೆ.

ಹಿಂದೂಗಳು,ಮುಸ್ಲಿಮರು ಹಾಗೂ ಕ್ರೈಸ್ತರು ಅವರವರ ನಂಬಿಕೆಯ ಪ್ರಕಾರ ಸಂವಿಧಾನದ ಆಶಯಕ್ಕೆ ಬದ್ದವಾಗಿ ಅವರವರು ಬದುಕುತ್ತಿದ್ದಾರೆ.ಆ ಕುರಿತು ಸಮಯ ಹಾಳುಮಾಡುವುದರಿಂದ, ನಮ್ಮ ಹುಡುಗರು ಪರಧರ್ಮಿಯರ ಜೊತೆ ಹೊಡೆದಾಡುವುದರಿಂದ ನಮಗಾಗುವ ಲಾಭವೇನು?.

ಲವ್ ಜಿಹಾದ್ ಎಂದರೇನು? ಆ ಬಗ್ಗೆ ಸರ್ಕಾರದ ಬಳಿ ದಾಖಲೆಗಳು ಏನಾದರೂ ಇದೇಯಾ ಎಂದು ಪ್ರಶ್ನಿಸಿದರು‌‌.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಪದವಿಧರರಿಗೆ ಉದ್ಯೋಗವನ್ನು ನೀಡಲು ಆದ್ಯತೆಯನ್ನು ನೀಡಲಿದೆ ಮತ್ತು ಯುವನಿಧಿ ಯೋಜನೆಯಡಿಯಲ್ಲಿ ತಿಂಗಳಿಗೆ ಮೂರು ಸಾವಿರ ರೂಪಾಯಿ ನಿರುದ್ಯೋಗ ಭತ್ಯೆಯನ್ನು ನೀಡುತ್ತೇವೆ ಹಾಗೂ ಅಕ್ಕಿ,ಬೇಳೆ,ಮೆಣಸು ಮುಂತಾದ ಅಗತ್ಯ ದಿನಸಿ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಲಿದೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನತಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ಸಹಾಯಧನ ಕೊಡುತ್ತೇವೆ,ಪೆಟ್ರೋಲ್, ಡಿಸೇಲ್, ಗ್ಯಾಸ್ ಮುಂತಾದವುಗಳ ಮೇಲಿನ ಜಿಎಸ್ಟಿ ಇಳಿಸುತ್ತೇವೆ ಹಾಗೂ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ತನಕದ ವಿದ್ಯುತ್ ಅನ್ನು ಪ್ರತಿ ಮನೆಗೆ ಉಚಿತವಾಗಿ ಕೊಡುತ್ತೇವೆ. ಹಾಗೆಯೇ ಇದೆಲ್ಲವುದರ ಜೊತೆಗೆ ಅನ್ನಭಾಗ್ಯ ಯೋಜನೆಯಡಿ ಹತ್ತು ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲಿದೆ ಇವೆಲ್ಲವೂ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಆಗಿದೆ.

ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರ ಸಹಿ ಇರುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡನ್ನು ಮನೆಮನೆಗೆ ವಿತರಿಸತೊಡಗಿದ್ದು ಬಿಜೆಪಿಗರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದರು.

2013ರ ವಿಧಾನಸಭಾ ಚುನಾವಣೆಯಲ್ಲಿ ನಾವು ಘೋಷಿಸಿದ್ದ 165 ಆಶ್ವಾಸನೆಗಳಲ್ಲಿ 165ನ್ನೂ ಈಡೇರಿಸಿದ ಪಕ್ಷ ನಮ್ಮದು.
ಎಂದು ಕಾಂಗ್ರೆಸ್ ಸೋಶಿಯಲ್ ಮೀಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಚಂದ್ರಶೇಖರ ಶೆಟ್ಟಿಯವರು ತಿಳಿಸಿದ್ದಾರೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago