ಉಡುಪಿ: ಕರ್ನಾಟಕ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯು ಮಾರ್ಚ್ 12ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದೆ ಎಂದು ವಿಜಯ ಸಂಕಲ್ಪ ರಥಯಾತ್ರೆಯ ರಾಜ್ಯ ಸಹ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ್ ತಿಳಿಸಿದರು.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ವಿಜಯ ಸಂಕಲ್ಪ ರಥಯಾತ್ರೆಯು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಹೊರಡಲಿದ್ದು, ಮಾ.13ರಂದು ಕಾಪು ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿದೆ.
ಮಾ.14ರಂದು ಕುಂದಾಪುರ ಮತ್ತು ಬೈಂದೂರು ಕ್ಷೇತ್ರದ ಮೂಲಕ ಶೃಂಗೇರಿಗೆ ತಲುಪಲಿದೆ. ಈ ರಥಯಾತ್ರೆಯಲ್ಲಿ ರೋಡ್ ಶೋ ಮತ್ತು ಪ್ರಮುಖರೊಂದಿಗೆ ಸಂವಾದ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವಿಜಯ ಸಂಕಲ್ಪ ರಥಯಾತ್ರೆಯ ಸಂಚಾಲಕ ಪ್ರಕಾಶ್ ಶೆಟ್ಟಿ ಪಾದಬೆಟ್ಟು, ಸಹ ಸಂಚಾಲಕರು ಅನಿತಾ ಶ್ರೀಧರ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್, ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ವಕ್ತಾರರಾದ ಕೆ ರಾಘವೇಂದ್ರ ಕಿಣಿ, ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಕಾರ್ಕಳ ಮಂಡಲ ಅಧ್ಯಕ್ಷರಾದ ಮಹಾವೀರ್, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಬೈಂದೂರು ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ, ಮಂಡಲಗಳ ವಿಜಯ ಸಂಕಲ್ಪ ರಥಯಾತ್ರೆ ಉಸ್ತುವಾರಿಗಳು ಉಪಸ್ಥಿತರಿದ್ದರು.