News Karnataka Kannada
Sunday, April 28 2024
ಉಡುಪಿ

ಕುಂದಾಪುರ: ಬ್ರಹತ್ ರಕ್ತದಾನ ಶಿಬಿರ ಕಾರ್ಯಕ್ರಮ

blood donation camp programme
Photo Credit : News Kannada

ಕುಂದಾಪುರ: ಯಕ್ಷಾಭಿಮಾನಿ ರಕ್ತದಾನ ಬಳಗ ಗಂಗೊಳ್ಳಿ,  ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ, ಶ್ರೀ ಸಾಯಿ ಸ್ಪಂದನ ಪೌಂಡೇಶನ್ ಕುಂದಾಪುರ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಕರಾವಳಿ ಪೊಲೀಸ್ ಠಾಣೆ ಗಂಗೊಳ್ಳಿ, ಜೆಸಿಐ ಕುಂದಾಪುರ ಅವರ ಸಹಯೋಗದೊಂದಿಗೆ ಬ್ರಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಗ್ರಾಮ ಜೆಟ್ಟಿಗ ದೇವಸ್ಥಾನ ಮಲ್ಯರಬೆಟ್ಟು ಗಂಗೊಳ್ಳಿಯಲ್ಲಿ ಶುಕ್ರವಾರ ನಡೆಯಿತು.

ಸಹಾಯಕ ನಿರ್ದೇಶಕರು ಮೀನುಗಾರಿಕಾ ಇಲಾಖೆ ಉಡುಪಿ ದಿವಾಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಅಧ್ಯಕ್ಷ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷ ಸೂರಜ್ ಖಾರ್ವಿ, ಆಪತ್ಭಾಂದವ ಸತೀಶ್ ಸಾಲಿಯಾನ್, ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ ನಿರೀಕ್ಷ ನಂಜಪ್ಪ, ಜೆಸಿಐ ಕುಂದಾಪುರ ಅಧ್ಯಕ್ಷ ಸುಧಾಕರ ಕಾಂಚನ್, ವಕೀಲರಾದ ರವಿಕುಮಾರ್ ಗಂಗೊಳ್ಳಿ, ಯಕ್ಷಾಭಿಮಾನಿ ರಕ್ತದಾನ ಬಳಗ ಗಂಗೊಳ್ಳಿ ಗಣೇಶ್ ಪೂಜಾರಿ, ಶ್ರೀಕಾಂತ್ ಬಿಲ್ಲವ ಗಂಗೊಳ್ಳಿ ಉಪಸ್ಥಿತರಿದ್ದರು.

ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ರಕ್ತದಾನ ಮಾಡುವುದರ ಮುಖೇನ ಸಾಮಾಜಿಕ ಕಾಳಜಿ ಮೆರೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು