ಕುಂದಾಪುರ: ಯಕ್ಷಾಭಿಮಾನಿ ರಕ್ತದಾನ ಬಳಗ ಗಂಗೊಳ್ಳಿ, ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ, ಶ್ರೀ ಸಾಯಿ ಸ್ಪಂದನ ಪೌಂಡೇಶನ್ ಕುಂದಾಪುರ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಕರಾವಳಿ ಪೊಲೀಸ್ ಠಾಣೆ ಗಂಗೊಳ್ಳಿ, ಜೆಸಿಐ ಕುಂದಾಪುರ ಅವರ ಸಹಯೋಗದೊಂದಿಗೆ ಬ್ರಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಗ್ರಾಮ ಜೆಟ್ಟಿಗ ದೇವಸ್ಥಾನ ಮಲ್ಯರಬೆಟ್ಟು ಗಂಗೊಳ್ಳಿಯಲ್ಲಿ ಶುಕ್ರವಾರ ನಡೆಯಿತು.
ಸಹಾಯಕ ನಿರ್ದೇಶಕರು ಮೀನುಗಾರಿಕಾ ಇಲಾಖೆ ಉಡುಪಿ ದಿವಾಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಅಧ್ಯಕ್ಷ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷ ಸೂರಜ್ ಖಾರ್ವಿ, ಆಪತ್ಭಾಂದವ ಸತೀಶ್ ಸಾಲಿಯಾನ್, ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ ನಿರೀಕ್ಷ ನಂಜಪ್ಪ, ಜೆಸಿಐ ಕುಂದಾಪುರ ಅಧ್ಯಕ್ಷ ಸುಧಾಕರ ಕಾಂಚನ್, ವಕೀಲರಾದ ರವಿಕುಮಾರ್ ಗಂಗೊಳ್ಳಿ, ಯಕ್ಷಾಭಿಮಾನಿ ರಕ್ತದಾನ ಬಳಗ ಗಂಗೊಳ್ಳಿ ಗಣೇಶ್ ಪೂಜಾರಿ, ಶ್ರೀಕಾಂತ್ ಬಿಲ್ಲವ ಗಂಗೊಳ್ಳಿ ಉಪಸ್ಥಿತರಿದ್ದರು.
ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ರಕ್ತದಾನ ಮಾಡುವುದರ ಮುಖೇನ ಸಾಮಾಜಿಕ ಕಾಳಜಿ ಮೆರೆದರು.