News Karnataka Kannada
Monday, April 29 2024
ಉಡುಪಿ

ಕಲ್ಸಂಕ ಬಳಿ ಸಿಕ್ಕಿದ ಯುವಕನ ಮೃತದೇಹದ ಗುರುತು ಪತ್ತೆ: ಇಂದ್ರಾಳಿ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ

Body of youth found near Kalsanka found, cremated at Indrali crematorium
Photo Credit : News Kannada

ಉಡುಪಿ: ಕಲ್ಸಂಕದ ಬಳಿ ಪಾಳುಬಿದ್ದ ಕಟ್ಟಡದಲ್ಲಿ ಅನುಮಾನಸ್ಪದ ರೀತಿಯಲ್ಲಿ ಕಂಡುಬಂದ ಯುವಕನ ಮೃತದೇಹದ ಗುರುತು ಪತ್ತೆಯಾಗಿದೆ. ಮೃತದೇಹದ ಗುರುತು ಪತ್ತೆಹಚ್ಚುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೃತನನ್ನು ಹೆಬ್ರಿ ಅಂಡಾರು ಗ್ರಾಮದ ಮುತ್ತು ಕುಟ್ಟನ್ ಅವರ ಮಗ ಅವಿನಾಶ್ ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆ ಕಲ್ಸಂಕದ ಪಾಳುಬಿದ್ದ ಕಟ್ಟಡದಲ್ಲಿ ಯುವಕನ ಮೃತದೇಹ ಸಿಕ್ಕಿದ್ದು, ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಮೃತದೇಹವನ್ನು ರಕ್ಷಿಸಿ ಇಡಲಾಗಿತ್ತು. ಇಂದು ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಮತ್ತು ಹೆಡ್ ಕಾನ್ ಸ್ಟೆಬಲ್ ಹರೀಶ್ ನಾಯ್ಕ್ ಅವರು ಕಾನೂನು ಪ್ರಕ್ರಿಯೆ ನಡೆಸಿದರು.

ಮೃತನ ಸಂಬಂಧಿಕರಿಗೆ ಅಂತ್ಯಸಂಸ್ಕಾರ ನಡೆಸಲು ಅಸಹಾಯಕತೆ ಎದುರಾದಾಗ ಪೊಲೀಸರು ಸಹಕಾರದೊಂದಿಗೆ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ಇಂದ್ರಾಳಿ ರುದ್ರಭೂಮಿಯಲ್ಲಿ ಮೃತದೇಹದ ಅಂತ್ಯಸಂಸ್ಕಾರ ನಡೆಸಲಾಯಿತು. ಪ್ಲಾವರ್ ವಿಷ್ಣು, ಯತೀಶ್ ಕಡಿಯಾಳಿ ಸಹಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು