News Karnataka Kannada
Saturday, May 04 2024
ಉಡುಪಿ

ಉಡುಪಿ ಮಾರುಕಟ್ಟೆಯಲ್ಲಿ ಮರದ ಕೊಂಬೆ ಮುರಿದು ಬಿದ್ದು ಅಂಗಡಿ, ಕಾರಿಗೆ ಹಾನಿ

ಕಳೆದ ರಾತ್ರಿಯಿಂದ ಸುರಿದ ಮಳೆಯ ಪರಿಣಾಮ ಉಡುಪಿ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪ ಇರುವ ತರಕಾರಿ ಮಾರುಕಟ್ಟೆಯಲ್ಲಿನ ಮರವೊಂದರ ಕೊಂಬೆ ಇಂದು ಮಧ್ಯಾಹ್ನ ವೇಳೆ ಮುರಿದು ಬಿದ್ದಿದ್ದು, ಇದರಿಂದ ಎರಡು ಅಂಗಡಿಗಳು ಹಾಗೂ ಒಂದು ಕಾರಿಗೆ ಹಾನಿಯಾಗಿದೆ.
Photo Credit : NewsKarnataka

ಉಡುಪಿ: ಕಳೆದ ರಾತ್ರಿಯಿಂದ ಸುರಿದ ಮಳೆಯ ಪರಿಣಾಮ ಉಡುಪಿ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪ ಇರುವ ತರಕಾರಿ ಮಾರುಕಟ್ಟೆಯಲ್ಲಿನ ಮರವೊಂದರ ಕೊಂಬೆ ಇಂದು ಮಧ್ಯಾಹ್ನ ವೇಳೆ ಮುರಿದು ಬಿದ್ದಿದ್ದು, ಇದರಿಂದ ಎರಡು ಅಂಗಡಿಗಳು ಹಾಗೂ ಒಂದು ಕಾರಿಗೆ ಹಾನಿಯಾಗಿದೆ.

ಮಾರುಕಟ್ಟೆಯಲ್ಲಿರುವ ಅಶ್ವಥ ಮರದ ಗೆಲ್ಲು ಮುರಿದು ಬಿದ್ದಿದ್ದು, ಇದರಿಂದ ಮಾರುಕಟ್ಟೆಯಲ್ಲಿರುವ ಶಫೀಕ್ ಎಂಬವರ ತರಕಾರಿ ಅಂಗಡಿ ಹಾಗೂ ಮುಸ್ತಫ್ ಎಂಬವರ ಹಣ್ಣಿನ ಅಂಗಡಿಗೆ ಹಾನಿಯಾಗಿದೆ. ಅದೇ ರೀತಿ ಮಾರುಕಟ್ಟೆಗೆ ಆಗಮಿಸಿದ್ದ ಗ್ರಾಹಕರೊಬ್ಬರ ಕಾರು ಜಖಂಗೊಂಡಿದೆ.
ಅಲ್ಲದೆ ಮರದ ಕೊಂಬೆ ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಿದೆ. ಈ ಅನಾಹುತದಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ನಗರಸಭೆ ಸಿಬಂದಿ, ಮೆಸ್ಕಾಂ ಸಿಬ್ಬಂದಿ ಮರ ತೆರವುಗೊಳಿಸುವ ಕಾರ್ಯ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು