Categories: ಉಡುಪಿ

ಮಣಿಪಾಲದಲ್ಲಿ ಬುಲ್ಡೋಜರ್ ಹರಿಸಿ ಕರ್ಕಶ ಸೈಲೆನ್ಸರ್ ನಾಶ

ಮಣಿಪಾಲ: ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಿನಿಂದ ಕಾರ್ಯಾಚರಣೆ ನಡೆಸಿ ಅನಧಿಕೃತ ಸೈಲೆನ್ಸರ್ ಅಳವಡಿಕೆ ಮಾಡಿದ್ದ ವಾಹನಗಳಿಗೆ ದಂಡ ವಿಧಿಸಿ ವಶಪಡಿಸಿಕೊಂಡ ಸೈಲೆನ್ಸರ್‌ಗಳನ್ನು ಇಂದು ಜೆಸಿಬಿ ವಾಹನದ ಮೂಲಕ ನಿಷ್ಕ್ರಿಯಗೊಳಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ನಿರ್ದೇಶನದ ಮೇರೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಲಿಂಗಪ್ಪ, ಉಡುಪಿ ಡಿವೈಎಸ್‌ಪಿ ದಿನಕರ ಮತ್ತು ಮಣಿಪಾಲ ಠಾಣಾಧಿಕಾರಿ ದೇವರಾಜ ಟಿವಿ ಉಪಸ್ಥಿತಿಯಲ್ಲಿ ಕಳೆದ 6 ತಿಂಗಳಿನಿಂದ ಮಣಿಪಾಲದ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗಿತ್ತು.

ಮಾರ್ಪಾಡಿಸಿದ ಸೈಲೆನ್ಸರ್ ಅಳವಡಿಸಿಕೊಂಡು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಸುಮಾರು 60ರಿಂದ 70 ದ್ವಿಚಕ್ರ ವಾಹನ ಸವಾರರಿಗೆ ತಲಾ 500 ರೂ.ನಂತೆ ದಂಡ ವಿಧಿಸಲಾಗಿತ್ತು. ಅಲ್ಲದೆ, ಆಲ್ಟ್ರೇಷನ್ ಮಾಡಿಸಿದ್ದ 4 ವಾಹನಗಳನ್ನು ವಶಪಡಿಸಿ ಆರ್‌ಟಿಓ ಮೂಲಕ 60 ಸಾವಿರ ರೂ.ದಂಡ ವಿಧಿಸಲಾಗಿದೆ. ವಾರಾಂತ್ಯದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ವ್ಹೀಲಿಂಗ್ ನಡೆಸುವುದು ಹಾಗೂ ನಿಯಮಾವಳಿ ಉಲ್ಲಂಘಿಸುವವರ ಮೇಲೆ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಲಿಂಗಪ್ಪ ತಿಳಿಸಿದ್ದಾರೆ. ಡಿವೈಎಸ್‌ಪಿ ದಿನಕರ, ಎಎಸ್‌ಐ ನವೀನ್ ನಾಯಕ್‌ ಉಪಸ್ಥಿತರಿದ್ದರು.

Gayathri SG

Recent Posts

ನಾಳೆ ರಾತ್ರಿಯಿಂದ ಆಂಬ್ಯುಲೆನ್ಸ್ ಸೇವೆ ಬಂದ್: ಸಿಬ್ಬಂದಿಗಳಿಂದ ಮುಷ್ಕರ

108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಕಾರಣಕ್ಕೆ ನಾಳೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ…

11 seconds ago

ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್ ಖಂಡಿಸಿ ಆರ್‌ಆರ್‌ಡಿ ವಕ್ತಾರ ರಾಜೀನಾಮೆ

ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಪ್ರಕರಣ ಎದುರಿಸುತ್ತಿದ್ದರೂ, ಅವರ ಪುತ್ರನಿಗೆ…

53 seconds ago

“ಚೆಲ್ಲದಿರಿ ಅನ್ನ ಬಡವರಿಗದೇ ಚಿನ್ನ”; ಸ್ವಿಗ್ಗಿಯ ವೈರಲ್‌ ಪೋಸ್ಟ್​​​

ಅಗತ್ಯಕ್ಕಿಂತ ಹೆಚ್ಚು ಅನ್ನವನ್ನು ತೆಗೆದುಕೊಂಡು ನಂತರ ಅದನ್ನು ಬಿಸಾಡಬೇಡಿ, ಅನ್ನ ದೇವರಿಗೆ ಸಮಾನ ಎಂದು ಹೇಳಿದ್ರೂ ಕೂಡಾ, ಈ ಮಾತುಗಳಿಗೆ…

11 mins ago

ಗುರು ಗ್ರಂಥ ಸಾಹೀಬ್​ ಪುಟಗಳನ್ನು ಹರಿದ ಯುವಕ : ಹೊಡೆದು ಕೊಂದ ಸ್ಥಳೀಯರು

ಪಂಜಾಬ್‌ನ ಗುರುದ್ವಾರವೊಂದರಲ್ಲಿ ಪೂಜ್ಯ ಗುರು ಗ್ರಂಥ ಸಾಹಿಬ್‌ನ ಪುಟಗಳನ್ನು ಹರಿದ ಆರೋಪದ ಮೇಲೆ 19 ವರ್ಷದ ಯುವಕನನ್ನು ಹೊಡೆದು ಹತ್ಯೆ…

21 mins ago

ದುಷ್ಕರ್ಮಿಗಳಿಂದ ನಡುರಸ್ತೆಯಲ್ಲಿಯೇ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ

ನಡುರಸ್ತೆಯಲ್ಲಿಯೇ ಸೀರೆಯಿಂದ ಕತ್ತು ಹಿಸುಕಿ ಗರ್ಭಿಣಿಯ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ.

23 mins ago

ಬಿಜೆಪಿಗೆ ಮತ ಹಾಕ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ವ್ಯಕ್ತಿಗೆ ಥಳಿತ

ಕಾಂಗ್ರೆಸ್​ಗೆ ಮತ ಹಾಕಲ್ಲ, ನಾವು ಬಿಜೆಪಿಗೆ ಮತ ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ…

43 mins ago