ಬೈಂದೂರು: ತಾಲೂಕಿನ ಬಿಜೂರು ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂ. ವಂಚಿಸಿದ ಆರೋಪದಡಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಈ ಪ್ರಕರಣದಲ್ಲಿ ಆಶ್ರಯ ನೀಡಿದ ಕಾಂಗ್ರೆಸ್ ನಾಯಕಿಯೊಬ್ಬರಿಗೂ ಸಂಕಷ್ಟ ಎದುರಾಗಿದೆ.
ಬಂಧನಕ್ಕೂ ಮುನ್ನ ಚೈತ್ರಾ ಕುಂದಾಪುರ ಅವರಿಗೆ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಂ ಅವರು ಆಶ್ರಯ ನೀಡಿದ್ದರು ಎನ್ನುವ ಆರೋಪದಡಿ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿ, ತನಿಖೆಗೆ ಹಾಜರಾಗಲು ತಿಳಿಸಿದೆ. ನಿನ್ನೆ ರಾತ್ರಿ ಬೆಂಗಳೂರಿನ ಪೊಲೀಸರು ಉಡುಪಿಗೆ ಆಗಮಿಸಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ಲೇಸ್ ನಲ್ಲಿ ಚೈತ್ರ ಕುಂದಾಪುರ ಮತ್ತು ಇಬ್ಬರನ್ನು ಬಂಧಿಸಿದ್ದರು.
ಉದ್ಯಮಿಯೊಬ್ಬರಿಂದ 7 ಕೋಟಿ ಪಡೆದು ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ವಂಚಿಸಿದ್ದಾರೆ ಎನ್ನುವ ಆರೋಪದಡಿ ಬಂಧನವಾಗಿದೆ.