ಬೈಂದೂರು: ಕರಿದ ಎಣ್ಣೆ ತಿಂಡಿಗಳಿಗೆ ಹೆಚ್ಚಿನ ಒತ್ತನ್ನು ನೀಡದೆ ಮನೆಯಲ್ಲಿ ತಯಾರಿಸಿದ ತಿಂಡಿ ಪದಾರ್ಥಗಳನ್ನು ಸೇವಿಸಬೇಕು ನಮ್ಮ ದೈನಂದಿನ ಚಟುವಟಿಕೆಗಳನ್ನು ಬದಲಾವಣೆ ಮಾಡಿಕೊಳ್ಳುವುದರ ಮುಖೇನ ಉತ್ತಮವಾದ ಆರೋಗ್ಯವನ್ನು ಪಡೆಯಲು ಸಾಧ್ಯವಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಂದಾಪುರ ಶ್ವೇತಾ.ಎನ್ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ ಮತ್ತು ಹೊಸಾಡು ಗ್ರಾಮ
ಪಂಚಾಯತ್ ವತಿಯಿಂದ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮರವAತೆ,ತ್ರಾಸಿ ಗಂಗೊಳ್ಳಿ ಲಯನ್ಸ್ ಕ್ಲಬ್ ಅವರ
ಸಹಕಾರದೊಂದಿಗೆ ಹೊಸಾಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಗ್ರಾಮ ಮಟ್ಟದ ಪೋಷಣ್ ಅಭಿಯಾನ
ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗರ್ಭಿಣಿ ಬಾಣಂತಿಯರು,ಮಕ್ಕಳು ಸೇರಿದಂತೆ ಸಮುದಾಯದ ಎಲ್ಲಾ ವರ್ಗದ ಜನರು ಪೌಷ್ಟಿಕವಾದ ಆಹಾರ ಸೇವನೆ ಮಾಡುವುದು ಅತಿ ಮುಖ್ಯವಾಗಿದೆ ಪ್ರತಿ ನಿತ್ಯವೂ ನಾವು ಆಹಾರವನ್ನು ಸೇವಿಸುತ್ತಿದ್ದೇವೆ ಆದರೆ ಅದು ಎಷ್ಟು ಪೌಷ್ಟಿಕತೆಯಿಂದ ಕೂಡಿದೆ ಎನ್ನುವುದು ಪ್ರಶ್ನೆ ಆಗಿದೆ ಎಂದರು.
ಹೊಸಾಡು ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಪಾರ್ವತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು, ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಜಯಶ್ರೀ ಹೊನ್ನುರ (ತನಿಖೆ),ಹೊಸಾಡು ಮಾಜಿ ಗ್ರಾ.ಪಂ ಉಪಾಧ್ಯಕ್ಷೆ ವಂದನಾ ಖಾರ್ವಿ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಂಘದ ರಾಜಾಧ್ಯಕ್ಷೆ ಫಿಲೋಮಿನಾ ಫೆರ್ನಾಂಡಿಸ್,ತ್ರಾಸಿ ಗಂಗೊಳ್ಳಿ ಲಯನ್ಸ್ ಕ್ಲಬ್ ಅಧ್ಯಕ್ಷ ನಾಗರಾಜ ಆಚಾರ್ಯ,ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿ.ಎಚ್.ಒ ಪ್ರವೀಣ್ ಕುಮಾರ ನಮ್ಮ ಭೂಮಿ ಸಂಸ್ಥೆ ಸಂಯೋಜಕಿಕೃಪಾ, ಆರೋಗ್ಯ ಕಾರ್ಯಕರ್ತೆ ಅರ್ಪಿತಾ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಗ್ರಾ.ಪಂ ಸಿಬ್ಬಂದಿಗಳು, ಗಂಗೊಳ್ಳಿ ಠಾಣೆ ಸಿಬ್ಬಂದಿ ದಿನೇಶ್.ಪಿ ಉಪಸ್ಥಿತರಿದ್ದರು, ವಲಯ ಮೇಲ್ವಿಚಾರಕಿ ರಾಜೇಶ್ವರಿ ಪ್ರಾಸ್ತವಿಕವಾಗಿ ಮಾತನಾಡಿದರು, ಪೋಷಣ್ ಅಭಿಯಾನ ವಲಯ ಸಂಯೋಜಕ ಮAಜುನಾಥ್ ಸ್ವಾಗತಿಸಿ ನಿರೂಪಿಸಿದರು, ಅಂಗನವಾಡಿ ಕಾರ್ಯಕರ್ತೆ ದಿವ್ಯಾ ವಂದಿಸಿದರು.